ಆರ್ಥಿಕ ಸಂಕಷ್ಟಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಡೆಗಣಿಸಲ್ಪಟ್ಟಿದ್ದ ಇಂದಿರಾ ಕ್ಯಾಂಟೀನ್ ಯೋಜನೆಯ ಪುನಶ್ಚೇತನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಒಡಿಶಾದ ಬಾಲಸೋರ್ನ ಬಹನಾಗ್ನಲ್ಲಿ ರೈಲ್ವೆ ಅಪಘಾತ ನಡೆದು ಸುಮಾರು 290 ಜನ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಕೇಂದ್ರ ಸರ್ಕಾರ ರೈಲ್ವೆ ಅಪಘಾತಕ್ಕೆ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಸಿಬಿಐ ತನಿಖೆಗೆ ಆದೇಶ ಮಾಡಿದ್ದಾರೆ.
ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಜಗತ್ತಿನಲ್ಲಿ ಕೆಲವೊಂದು ಅಪರಾಧ ಪ್ರಕರಣಗಳು ಕೇವಲ ಸಣ್ಣಸಣ್ಣ ವಿಚಾರಕ್ಕೆ ಊಹೆಗೂ ಮೀರಿದ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇಂತಹ ಅಪರಾಧ ಪ್ರಕರಣವನ್ನ ನೋಡುವ ಜನ ಈ ರೀತಿಯಾದ ಘಟನೆಗಳು ಕೂಡ ನಡೆಯೋದಕ್ಕೆ ಸಾಧ್ಯವಿದ್ಯಾ ಎಂದು ಉದ್ಘರಿಸುತ್ತಾರೆ. ಆದ್ರೆ ಹಾಗೆ ಉದ್ಘರಿಸವರ ಊಹೆಗೂ ಮೀರಿದ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದೀಗ ಇಂತಹದ್ದೇ ಒಂದು ವಿಚಿತ್ರವಾದ ಘಟನೆ ಬೆಂಗಳೂರಿನ ತಲ್ಲಘಟಪುರ ನಡೆದಿದೆ.
ನನ್ನ ಫೋಟೋವನ್ನು ಚಂದವಾಗಿ ಅಚ್ಚು ಮಾಡಿ ಮಸಿ ಬಳಿಯುವ ಕೆಲಸ ಮಾಡಿದ್ದಲ್ಲದೇ ಅದೆಷ್ಟೋ ಬಾರಿ ನನ್ನ ತೇಜೋವಧೆ ಮಾಡುವ ಕೆಲಸ ನಡೆದಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಸದಾನಂದ ಗೌಡ ಆರೋಪಿಸಿದ್ದಾರೆ.
ಶಾಲಾ ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಿದ್ದು ಈ ಸಮಿತಿಗೆ ಸಿಎಂ ಸಿದ್ದರಾಮಯ್ಯ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬರಗೂರು ರಾಮಚಂದ್ರಪಪ, ನಿರಂಜನ ಆರಾಧ್ಯ ಸೇರಿದಂತೆ ಅನೇಕರ ಜೊತೆ ಚರ್ಚಿಸಿದ ಸಿದ್ದರಾಮಯ್ಯ ಪಠ್ಯ ಪರಿಷ್ಕರಣೆಯಲ್ಲಿನ ಲೋಪದೋಷಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳನ್ನು ಜಾರಿ ಮಾಡುವಾಗ ಶುಯರುವಾಗಿದ್ದ ಬಹು ದೊಡ್ಡ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಹಾಗು ಇಂಧನ ಸಚಿವ ಕೆ.ಜೆ ಜಾರ್ಜ್ ತೆರೆ ಎಳೆದಿದ್ದಾರೆ. ಜೂನ್ 15 ರಿಂದ ಅರ್ಜಿ ಹಾಕಲು ಆದೇಶ ಹೊರಡಿಸಿರುವ ಇಂಧನ ಇಲಾಖೆ ಅರ್ಜಿಗಳನ್ನು ಪಡೆಯುವಾಗ ಏನೇನು ದಾಖಲೆಗಳನ್ನು ಪಡೆದುಕೊಳ್ಳಬೇಕು..?
ಕಾಂಗ್ರೆಸ್ ಪಕ್ಷ ಗೆಲುವಿನ ಅಮಲಿನಲ್ಲಿ ಆಕಾಶದಲ್ಲಿ ಇದೆ. ನಾವು ನೆಲದಲ್ಲಿ ಇದ್ದೇವೆ. ನಾವು ಆಕಾಶಕ್ಕೆ ಏರಲು ಆಗುತ್ತಾ..? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟರು.ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಲು ಬಂದಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಖ್ ಅಬ್ದುಲ್ಲಾ ಅವರನ್ನು ಬೀಳ್ಕೊಟ್ಟ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.
ಜೂನ್ 8-ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17-18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂಧನ ಸಚಿವ ಕೆ.ಜೆ ಜಾರ್ಜ್ ಇಂದು ನಗರದ ಹೆಚ್ಆರ್ಬಿಆರ್ ಲೇಔಟ್ನ ಕುರಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಗಿಯಾದರು.