ರಾಜ್ಯದ ರಾಜಕರಾಣವೇ ಒಂದಾದರೇ ಬೆಳಗಾವಿಯ ರಾಜಕಾರಣವೇ ಬೇರೆ, ಇಲ್ಲಿನ ಜಮಪ್ರತಿನಿಧಿಗಳು ಸರ್ಕಾರವನ್ನ ಉರಳಿ ಬೇರೆ ಸರ್ಕಾರ ರಚಿಸುವಷ್ಟು ಬಲಿಷ್ಟರಿದ್ದಾರೆ ಎನ್ನು ಮಾತು ಈಗಾಗಲೇ ರಾಜಕೀಯ ಪಡಸಾಲೇಯಲ್ಲಿ ಕೇಳುತ್ತಲೇ ಇದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಕಾಂಗ್ರೆಸ್ 11 ಸ್ಥಾನ ಗೆಲ್ಲುವ ಮೂಲಕ ಸಚಿವಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಶಾಸಕರಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. ಬೆಳಗಾವಿ ಜಿಲ್ಲೆಯ ಪರವಾಗಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಜೊತೆ ಪ್ರಮಾಣ ವಚನಕ್ಕೆ ಅವಕಾಶ ಸಿಕ್ಕಿದ್ದು ಹೊರತುಪಡಿಸಿ, ಉಳಿದ ಶಾಸಕರಿಗೆ ಕಾಯುವುದು ಅನಿವಾರ್ಯವಾಗಿದೆ.
ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಗೋಹತ್ಯೆ ಕಾಯ್ದೆಯನ್ನು ನಿಷೇಧ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರಿಗೆ ಮುಂದಿನ ಐದು ವರ್ಷಗಳ ಕಾಲ ಹೋರಾಟ ಮಾಡುವುದನ್ನು ಬಿಟ್ಟು ಇನ್ಯಾವ ಕೆಲಸವಿದೆ ಎಂದು ಪ್ರಶ್ನಿಸಿದ್ದಾರೆ.
ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಕುರಿತಂತೆ ಕಳೆದ ಅನೇಕ ದಿನಗಳಿಂದ ಚರ್ಚೆ ಜೋರಾಗಿದೆ. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹಸುಗಳ ವಧೆ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿರೋದು ತೀವ್ರ ವಿರೋಧಕ್ಕೆ ಕಾರಣವಾಗಿದೆ.
ಔರಂಗಜೇಬ ಹಾಗೂ ಟಿಪ್ಪು ಸುಲ್ತಾನ್ರನ್ನು ವರ್ಣಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ವಿರೋಧ ಹೆಚ್ಚಾಗಿದ್ದು ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರದ ರೂಪವನ್ನು ಪಡೆದುಕೊಂಡಿದ್ದು ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.
ಕೊಲ್ಹಾಪುರದ ಜನತೆ ಈ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ನನಗನಿಸುತ್ತಿಲ್ಲೆಂದು ಉದ್ಧವ್ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತಂತೆ ಪ್ರತಿಕ್ರಿಯಿಸಿದ ಅವರು ಪರಿಸ್ಥಿತಿಯನ್ನು ಕದಡಲು ಹೊರಗಿನಿಂದ ಜನರನ್ನು ಕೊಲ್ಹಾಪುರಕ್ಕೆ ಕರೆಯಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಮಕ್ಕಳು ತೆರಿಗೆ ಪಾವತಿ ಮಾಡುತ್ತಿದ್ದರೆ ಅಂತಹ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಾಸಿಕ 2000 ರೂಪಾಯಿ ಸೌಲಭ್ಯ ಸಿಗೋದಿಲ್ಲ ಅಂತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ
ಸಚಿವೆಯಾದ ಬಳಿಕ ಇದೇ ಮೊದಲ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. ಗೆ ದೇಗುಲದ ಆಡಳಿತ ಮಂಡಳಿಯಿಂದ ಭರ್ಜರಿ ಸ್ವಾಗತ ಕೋರಿದರು. ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್.
ಬೆಳಗಾವಿ ಜಿಲ್ಲೆ ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮ ಕುಮಾರ ನಂದಿ ಮಹಾರಾಜರ ಹತ್ಯೆ ನಡೆದಿದ್ದು, ಭೀಕರ ಹತ್ಯೆಗೆ ಇಡೀ ರಾಜ್ಯವೇ ಮರುಗುತ್ತಿದೆ.