ಲೋಕಸಭಾ ಚುನಾವಣೆಯಲ್ಲಿ ಸಿಎಂ, ಡಿಸಿಎಂ ಕೂಡ ಸ್ಪರ್ಧೆ ಮಾಡಲಿ ಎಂಬ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಪತಿ-ಪತ್ನಿಯ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇವತ್ತಿನ ಕಾರ್ಯಕ್ರಮದಲ್ಲಿ ಮಹಿಳೆಯರೇ ಹೆಚ್ಚಿರೋದು ವಿಶೇಷ. ನಾನು ಕೋಲಾರದಲ್ಲಿ ಹುಟ್ಟಿದ್ದು, ಗೆದ್ದಿದ್ದು ಬೆಂಗಳೂರಿನಲ್ಲಿ.
ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ನಮ್ಮ ದೇಶದಲ್ಲಿ ನಡೆಯುತ್ತಿರುವ ದೊಡ್ಡ ಕ್ರಾಂತಿ ಎಂದರೆ ಅದು ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ. ಅವರ ಯಾತ್ರೆ ಕುರಿತಾಗಿ ವಿರೋಧ ಪಕ್ಷಗಳು ಅನೇಕ ಪ್ರಶ್ನೆಗಳನ್ನು ಎತ್ತುತ್ತಾರೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.
ಕೆರಗೋಡು ಹನುಮ ಧ್ವಜ ತೆರವು ವಿವಾದ ಸಂಬಂಧ ಜಿಲ್ಲಾಧಿಕಾರಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪರಿಣಾಮ, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್ ಅನ್ನು ಮಾಡದಿರಲು ನಿರ್ಧರಿಸಲಾಗಿದೆ.
ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ್ ಸವದಿ ಕೂಡ ಬಿಜೆಪಿಗೆ ವಾಪಸ್ಸಾಗುತ್ತಾರೆ ಎಂಬ ಚರ್ಚೆ ಎಲ್ಲೆಡೆ ನಡೆಯುತ್ತಿದೆ.
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಟಕ್ಕೆ ಮುಂದಾಗಿರುವ ಕಾಂಗ್ರೆಸ್ ನಾಯಕರು.
ರಾಜ್ಯದಲ್ಲಿ ದೊಡ್ಡಮಟ್ಟದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರವು ವಿಚಾರ ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಾಗಿದೆ. ವಿವಾದವನ್ನು ಖಂಡಿಸಿ ಬಿಜೆಪಿ ನಾಯಕರೊಂದಿಗೆ ಜೆಡಿಎಸ್ ನಾಯಕರು ಸಹ ಬೀದಿಗಿಳಿದು ಹೋರಾಟ ನಡೆಸಿದ್ದು ಎಲ್ಲರ ಗಮನ ಸೆಳೆದಿತ್ತು.
ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿರುವ ನರಸಿಂಹರಾಜ ಪೊಲೀಸರು, ಆರೋಪಿಗಳಿಂದ 47.42 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.