ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಟಕ್ಕೆ ಮುಂದಾಗಿರುವ ಕಾಂಗ್ರೆಸ್ ನಾಯಕರು.
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಟಕ್ಕೆ ಮುಂದಾಗಿರುವ ಕಾಂಗ್ರೆಸ್ ನಾಯಕರು.
ಬೆಂಗಳೂರು :
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಟಕ್ಕೆ ಮುಂದಾಗಿರುವ ಕಾಂಗ್ರೆಸ್ ನಾಯಕರು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಫೆ.7ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿರುವ ಕಾಂಗ್ರೆಸ್ ನಾಯಕರು, ತಾವು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ದನಿ ಎತ್ತುವಂತೆ ರಾಜ್ಯದ ಸಂಸಸದರು, ಇನ್ನಿತರ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಎಲ್ಲ ಸಂಸದರಿಗೂ ಪತ್ರಬರೆದಿದ್ದು, ʻಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ಕೇಂದ್ರದಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯನ್ನು ವಿರೋಧಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ಕನ್ನಡಿಗರ ಸ್ವಾಭಿಮಾನಿ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆʼ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಸಂಸದರು ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ತಮ್ಮ ಪತ್ರದಲ್ಲಿ ಕೋರಿದ್ದಾರೆ.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0