ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ನಡುವಿನ ವಾಕ್‌ ಸಮರ ಮುಂದುವರಿದಿದೆ. ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಪ್ರತಾಪ್‌ ಸಿಂಹ, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್‌ ಕೊಟ್ಟಿದ್ದಾರೆ.