ತಾಲೂಕು ಮತ್ತು ನಾಡು ಕಂಡ ಅಭಿವೃದ್ಧಿ ಪರಿಹಾರ ಸದಾ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸಿದ್ದರಾಮಯ್ಯನವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾಜೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಮಣ್ಣ ಭಜಂತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿಕೊಂಡರು
ತಾಲೂಕು ಮತ್ತು ನಾಡು ಕಂಡ ಅಭಿವೃದ್ಧಿ ಪರಿಹಾರ ಸದಾ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸಿದ್ದರಾಮಯ್ಯನವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾಜೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಮಣ್ಣ ಭಜಂತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿಕೊಂಡರು
ಕುಕನೂರ
ತಾಲೂಕು ಮತ್ತು ನಾಡು ಕಂಡ ಅಭಿವೃದ್ಧಿ ಪರಿಹಾರ ಸದಾ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಸಿದ್ದರಾಮಯ್ಯನವರ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾಜೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಮಣ್ಣ ಭಜಂತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿಕೊಂಡರು.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿ ವರದಿಗಾರರೊಂದಿಗೆ ರಾಮಣ್ಣ ಭಜಂತ್ರಿ ಮಾತನಾಡುತ್ತ ಕರ್ನಾಟಕ ರಾಜ್ಯ ಕಂಡಂತಹ ಅಭಿವೃದ್ಧಿಯ ಹರಿಕಾರ, ಆರ್ಥಿಕ ಚಾಣಾಕ್ಷ ರಾಜಕಾರಣಿ ಸದಾ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡುವ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವಸ್ಥಾನ ನೀಡಬೇಕು
ಅವರಿಗೆ ಸಚಿವ ಸ್ಥಾನ ನೀಡುವುದರಿಂದ ರಾಜ್ಯದ ಅಭಿವೃದ್ಧಿಯ ಪರ್ವ ನಾಗಲಾಟದತ್ತ ಸಾಗುತ್ತದೆ ರಾಜ್ಯದ ಆರ್ಥಿಕತೆಯ ಬಗ್ಗೆ ಕಾನೂನಿನ ಬಗ್ಗೆ ಅವರಿಗೆ ಅಪಾರವಾದ ಪಾಂಡಿತ್ಯವಿದ್ದು ಯಲಬುರ್ಗಾದಂತಹ ಹಿಂದುಳಿದ ಭಾಗಗಳು ಅಭಿವೃದ್ಧಿ ಯಾಗುವುದರ ಜೊತೆಗೆ ರಾಜ್ಯದ ಹಾರ್ಥಿಕತೆಯು ಸುಧಾರಣೆಯಾಗುತ್ತದೆ, ಯಲಬುರ್ಗಾ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲೇ ಅಭಿವೃದ್ಧಿಯ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಬಸವರಾಜ ರಾಯರೆಡ್ಡಿಯವರ ಪರಿಶ್ರಮ ಅಗಾಧವಾಗಿದ್ದು ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದರ ಜೊತೆಗೆ ಸುಸಜ್ಜಿತ ಶಾಲಾ ಕೊಠಡಿ ಪ್ರತಿ ಗ್ರಾಮಗಳಲ್ಲೂ ಸಿಸಿ ರಸ್ತೆ, ರೈಲ್ವೆ ಮಾರ್ಗ, ಇಂಜಿನಿಯರಿಂಗ್ ಕಾಲೇಜ್, ರಾಷ್ಟ್ರೀಯ ಹೆದ್ದಾರಿ, ಪಿಜಿ ಸೆಂಟರ್, ನವೋದಯ ವಿಶ್ವವಿದ್ಯಾಲಯ ಇನ್ನಿತರೇ ಅನೇಕ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಕ್ಷೇತ್ರದ ಜನತೆಯ ನಾಡಿಮಿಡಿತವನ್ನು ಅರಿತ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಸಚಿವ ಸ್ಥಾನ ನೀಡಿದಲ್ಲಿ ಈ ಕ್ಷೇತ್ರವು ಇನ್ನೂ ಅಭಿವೃದ್ಧಿ ಪಥದತ್ತ ಸಾಗುವದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0