ಬೇಸಿಗೆ ಸುಡು ಬಿಸಿಲಿನಲ್ಲಿ ಕಾಯಕ ಮಾಡುವ ನೆರೇಗಾ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ತಳಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದಿಬಸಯ್ಯ ಹಿರೇಮಠ ಹೇಳಿದರು.
ಬೇಸಿಗೆ ಸುಡು ಬಿಸಿಲಿನಲ್ಲಿ ಕಾಯಕ ಮಾಡುವ ನೆರೇಗಾ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ತಳಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದಿಬಸಯ್ಯ ಹಿರೇಮಠ ಹೇಳಿದರು.
ಕುಕನೂರು :
ಬೇಸಿಗೆ ಸುಡು ಬಿಸಿಲಿನಲ್ಲಿ ಕಾಯಕ ಮಾಡುವ ನೆರೇಗಾ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ತಳಕಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದಿಬಸಯ್ಯ ಹಿರೇಮಠ ಹೇಳಿದರು.
ತಾಲೂಕಿನ ತಳಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡವಿಹಳ್ಳಿ ಗ್ರಾಮದಲ್ಲಿ ನೆರೇಗಾ ಕಾಮಗಾರಿ ನಡೆಯುವ ಸ್ಥಳದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರ ಉದ್ದೇಶಿಸಿ ಮಾತನಾಡುತ್ತಾ ಕೆರೆ ಹೂಳೆತ್ತುವ ಕಾಮಗಾರಿಯನ್ನು 400 ಜನ ಕೂಲಿಕಾರರು ಎಪ್ರೀಲ್ ತಿಂಗಳಿನಿಂದ ಕೆಲಸ ಮಾಡುತ್ತಿದ್ದಾರೆ. ಬೇಸಿಗೆ ಬಿಸಿಲಿನ ಮಧ್ಯಯೂ ಬಹಳಷ್ಟು ಶ್ರಮದಿಂದ ಕೆಲಸ ಮಾಡಿದ್ದರಿಂದ ಕೆರೆ ಸುಂದರವಾಗಿ ನಿರ್ಮಾಣ ಮಾಡಿದ್ದಾರೆ.ಕಳೆದ ವರ್ಷಕ್ಕಿಂತ ಈ ವರ್ಷ ಬೇಸಿಗೆ ಸುಡು ಬಿಸಿಲು ಹೆಚ್ಚಾಗಿರುವುದರಿಂದ ನೆರೇಗಾ ಕಾರ್ಮಿಕರು ಎಲ್ಲರೂ ಆರೋಗ್ಯ ತಪಾಸಣೆಗೆ ಒಳಪಟ್ಟು ಆರೋಗ್ಯವಂತರಾಗಿರಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಆದಿಬಸಯ್ಯ ಹಿರೇಮಠ ಕರೆ ನೀಡಿದರು.
ನಂತರ ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮಾತನಾಡಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಸುಕ್ಷಾ ಬಿಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆಯನ್ನು ನರೇಗಾ ಎಲ್ಲಾ ಕೂಲಿಕಾರರು ಕಡ್ಡಾಯವಾಗಿ ಮಾಡಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಕೆ.ಎಚ್.ಪಿ.ಟಿ ಸಂಯೋಜಕ ರಫಿಕ್, ಆಶಾ ಕಾರ್ಯಕರ್ತೆ ಯರು, ಕಾಯಕ ಬಂಧುಗಳು ಕೂಲಿಕಾರರು ಹಾಜರಿದ್ದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0