ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಚುನಾವಣಾ ಅಖಾಡ ರಂಗೇರುತ್ತಿದೆ. ಮೂರು ಪಕ್ಷದ ಅಭ್ಯರ್ಥಿ ವಿಚಾರವಾಗಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದ್ದರೆ, ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರ ನಡೆ ಕೂಡ ಎಲ್ಲರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಚುನಾವಣಾ ಅಖಾಡ ರಂಗೇರುತ್ತಿದೆ. ಮೂರು ಪಕ್ಷದ ಅಭ್ಯರ್ಥಿ ವಿಚಾರವಾಗಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದ್ದರೆ, ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರ ನಡೆ ಕೂಡ ಎಲ್ಲರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಮಂಡ್ಯ :
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಚುನಾವಣಾ ಅಖಾಡ ರಂಗೇರುತ್ತಿದೆ. ಮೂರು ಪಕ್ಷದ ಅಭ್ಯರ್ಥಿ ವಿಚಾರವಾಗಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿದ್ದರೆ, ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರ ನಡೆ ಕೂಡ ಎಲ್ಲರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಸದ್ಯದ ಪರಿಸ್ಥಿತಿಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳಿದ್ದರೂ, ಪಕ್ಷೇತರ ಅಥವಾ ಪಕ್ಷದಿಂದ ಸ್ಪರ್ಧೆ ಮಾಡ್ತಾರಾ ಎಂಬುದು ನಿಗೂಢವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಎಂಪಿ ಚುನಾವಣೆಗೆ ಸುಮಲತಾ ಸ್ಪರ್ಧಿಸುವುದು ಅನುಮಾನ ಎನ್ನಲಾಗಿತ್ತು. ಇದೀಗ ಮಂಡ್ಯದಿಂದಲೇ ಸುಮಲತಾ ಅಂಬರೀಶ್ ಸ್ಪರ್ಧೆ ಬಹುತೇಕ ಖಚಿತ ಎಂಬ ಮಾತುಗಳು ಕೇಳಿ ಬರುತ್ತಿದೆ.
ಈ ನಡುವೆ ಇಂದು ಸುಮಲತಾ ಅಂಬರೀಶ್ ಆಪ್ತರ ಸುದ್ದಿಗೋಷ್ಟಿ ಆಯೋಜಿಸಲಾಗಿದ್ದು, ಸುದ್ದಿಗೋಷ್ಟಿಯಲ್ಲಿ ಸುಮಲತಾ ಅವರ ಮುಂದಿನ ರಾಜಕೀಯ ನಿಲುವಿನ ಬಗ್ಗೆ ಮಾಹಿತಿ ನೀಡುವ ನಿರೀಕ್ಷೆ ಹೆಚ್ಚಾಗಿದೆ. ಸಂಸದೆ ಸುಮಲತಾ ಅಂಬರೀಶ್ ಆಪ್ತರಿಂದ ಕರೆಯಲಾಗಿರುವ ಮಹತ್ವದ ಸುದ್ದುಗೋಷ್ಠಿ ಎಲ್ಲರ ಗಮನ ಸೆಳೆದಿದ್ದು, ಬೆಳಗ್ಗೆ 11.30ಕ್ಕೆ ಆರಂಭವಾಗಲಿರುವ ಸುದ್ದಿಗೋಷ್ಠಿಯಲ್ಲಿ ಏನೆಲ್ಲಾ ಮಾಹಿತಿ ಹೊರಬೀಳುತ್ತದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ವರದಿ : ರವಿಕುಮಾರ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0