ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಆರ್ ಹರಿ ಅವರಿಂದ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ
ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಆರ್ ಹರಿ ಅವರಿಂದ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ
ಯಲಬುರ್ಗಾ :
ಯಲಬುರ್ಗಾ ವಿಧಾನಸಭಾ ಕ್ಷೇತ್ರದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಆರ್ ಹರಿ ಅವರಿಂದ ಯಲಬುರ್ಗಾ ಪಟ್ಟಣದಲ್ಲಿ ಭರ್ಜರಿ ಪ್ರಚಾರ ಕಾರ್ಯವನ್ನು ಕೈಗೊಳ್ಳಲಾಯಿತು.
ಪಟ್ಟಣದ ಹೃದಯ ಭಾಗದಲ್ಲಿರುವ ಕಿತ್ತೂರು ಚೆನ್ನಮ್ಮ ವೃತ್ತದಿಂದ ಪ್ರಾರಂಭಗೊಂಡ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯವು ಮೊಗ್ಗಿ ಬಸವೇಶ್ವರ ದೇವಸ್ಥಾನ, ಡಾ// ಬಾ ಬಾ ಸಾಹೇಬ್ ಅಂಬೇಡ್ಕರ್ ನಗರ, ಬಾಬು ಜಗಜೀವನ್ ರಾಮ್ ನಗರ, ಟಿಪ್ಪು ಸುಲ್ತಾನ್ ವೃತ್ತ, ಕನಕದಾಸ ವೃತ ಸೇರಿದಂತೆ ಪಟ್ಟಣದ ಪ್ರತಿಯೊಂದು ಏರಿಯಾದಲ್ಲಿ ಸಂಚರಿಸಿ ಮನೆ ಮನೆ ಮತಯಾಚನೆ ಕಾರ್ಯ ವನ್ನು ಮಾಡಿದರು.
ಡಾ // ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ವೃತ್ತದ ಹತ್ತಿರ ಎನ್ ಸಿ ಪಿ ಪಕ್ಷದ ಅಭ್ಯರ್ಥಿ ಆರ್ ಹರೀಶ್ ಮಾತನಾಡುತ್ತಾ ಕ್ಷೇತ್ರವನ್ನು ಆಳಿದ ಜನಪ್ರತಿನಿಧಿಗಳು ಒಂದೇ ನಾಣ್ಯದ ಎರಡು ಮುಖಗಳು ಆಗಿದ್ದು ಕ್ಷೇತ್ರದ ಅಭಿವೃದ್ಧಿ ಕಡೆ ಗಮನಹರಿಸದೆ ಸ್ವ ಅಭಿವೃದ್ಧಿ ಮಾಡುತ್ತಾ ಬಂದಿರುತ್ತಾರೆ ಈ ಬಾರಿ ಕ್ಷೇತ್ರದ ಮತದಾರ ಇದಕ್ಕೆ ಉತ್ತರ ನೀಡಲು ಬದಲಾವಣೆಯನ್ನು ಬಯಸಿದ್ದು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ.ನಾವು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮ ವಹಿಸಿ ಕಾರ್ಯಮಾಡುತ್ತೇನೆ ನಿರುದ್ಯೋಗ ಯುವಕ ಯುವತಿಯರಿಗೆ 10000 ಉದ್ಯೋಗ ಸೃಷ್ಟಿ ಮಾಡಲಾಗುವುದು ಆದ್ದರಿಂದ ಪ್ರತಿಯೊಬ್ಬ ಮತದಾರರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷಕ್ಕೆ ಗುರುತಿಸಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಏನ್ ಸಿ ಪಿ ಜಿಲ್ಲಾ ಕಾರ್ಯಾಧ್ಯಕ್ಷರಾದ ನಾಗನಗೌಡ ಪೊಲೀಸ್ ಪಾಟೀಲ್ ಎಸ್ ಸಿ ಘಟಕದ ಉಪಾಧ್ಯಕ್ಷರಾದ ಯಲ್ಲೇಶ ಕೋನಸಾಗರ ವಿರುಪಾಕ್ಷಪ್ಪ ಹುಣಸಿಹಾಳ ವೀರಣ್ಣ ಮಾಳಿ ಇನ್ನಿತರ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿಗಾರ - ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0