ಎಮ್ಮೆ ಕೋಣಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು ಎಂಬ ಸಚಿವ ಕೆ.ವೆಂಕಟೇಶ್ ಹೇಳಿಕೆಗೆ ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಕಾವೇರಿ ನೀರು ಸಮುದ್ರಕ್ಕೆ ಹರಿಯುವ ಹೆಚ್ಚುವರಿ ನೀರನ್ನು ರಾಜ್ಯದ ಹಿತಾಸಕ್ತಿಗೆ ಬಳಸಿಕೊಳ್ಳಲಿ ಎಂದು ಆಗ್ರಹಿಸಿದರು.