ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಯಾರನ್ನು ಮುಖ್ಯಮಂತ್ರಿಯನ್ನಾಗಿ (Karnataka Chief Minister) ಘೋಷಣೆ ಮಾಡಬೇಕೆಂಬುದು ಕಾಂಗ್ರೆಸ್ (Congress) ಹೈಕಮಾಂಡ್ಗೆ ಕಗ್ಗಂಟಾಗಿದೆ. ಇದರ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ( ಮೇ 15ರಂದು) ನಿನ್ನೆ ದೆಹಲಿಗೆ (Delhi) ತೆರಳಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ (DK Shivakumar) ಇಂದು ದೆಹಲಿ ತಲುಪಿದ್ದಾರೆ.
ಬೆಂಗಳೂರು :
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಯಾರನ್ನು ಮುಖ್ಯಮಂತ್ರಿಯನ್ನಾಗಿ (Karnataka Chief Minister) ಘೋಷಣೆ ಮಾಡಬೇಕೆಂಬುದು ಕಾಂಗ್ರೆಸ್ (Congress) ಹೈಕಮಾಂಡ್ಗೆ ಕಗ್ಗಂಟಾಗಿದೆ. ಇದರ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ( ಮೇ 15ರಂದು) ನಿನ್ನೆ ದೆಹಲಿಗೆ (Delhi) ತೆರಳಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ (DK Shivakumar) ಇಂದು ದೆಹಲಿ ತಲುಪಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಮಾಧ್ಯಮಗ ಜೊತೆ ಮಾತನಾಡಿರುವ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು. ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ. ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ. ನಾನು ಒಬ್ಬನೇ ಹೋಗುತ್ತಿದ್ದೇನೆ. ಒಬ್ಬನೇ ಬರುವಂತೆ ಪ್ರಧಾನ ಕಾರ್ಯದರ್ಶಿಯವರು ನನಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ. ನನ್ನ ಆರೋಗ್ಯ ಸುಧಾರಿಸಿದ್ದು, ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ ಎಂದಿದ್ದಾರೆ. ಜನ ನಮಗೆ ನೀಡಿರುವ ಆಶೀರ್ವಾದ, ನಮ್ಮ ಮೇಲೆ ಇಟ್ಟಿರುವ ನಂಬಿಕೆ, ಉಳಿಸಿ ಬೆಳೆಸಿಕೊಂಡು ಹೋಗಲು ನಾವು ಶ್ರಮಿಸಬೇಕಿದೆ. ನಾವು ಕಾನೂನು ಬದ್ಧವಾಗಿ ದೇಶದ ಸಂವಿಧಾನ ಉಳಿಸಲು, ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಿಸಲು ರಾಜ್ಯದ ಜನತೆ ಹಾಗೂ ತಾಯಿ ಚಾಮುಂಡೇಶ್ವರಿ ಅವರ ಆಶೀರ್ವಾದ ಇರಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೈಕಮಾಂಡ್ ಬಳಿ ಸಿಎಂ ಸ್ಥಾನ ಕೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಪಕ್ಷದ ರಾಷ್ಟ್ರೀಯ ನಾಯಕರು ನನ್ನನ್ನು ಏಕಾಂಗಿಯಾಗಿ ಬರಲು ತಿಳಿಸಿದ್ದು, ಹೀಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ’ ಎಂದಷ್ಟೇ ತಿಳಿಸಿದ್ದಾರೆ.
ಠೀಕೆಗಳು 0