ಕಾಂಗ್ರೆಸ್ ಪಕ್ಷವು ಎಸ್ಸಿ/ಎಸ್ಟಿ ಮತ್ತು ಲಿಂಗಾಯತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನೀಡಿರುವ ಮೀಸಲಾತಿಯನ್ನು ವಿರೋಧ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್
ಕಾಂಗ್ರೆಸ್ ಪಕ್ಷವು ಎಸ್ಸಿ/ಎಸ್ಟಿ ಮತ್ತು ಲಿಂಗಾಯತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನೀಡಿರುವ ಮೀಸಲಾತಿಯನ್ನು ವಿರೋಧ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್
ಕುಕನೂರು :
ಕಾಂಗ್ರೆಸ್ ಪಕ್ಷವು ಎಸ್ಸಿ/ಎಸ್ಟಿ ಮತ್ತು ಲಿಂಗಾಯತರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನೀಡಿರುವ ಮೀಸಲಾತಿಯನ್ನು ವಿರೋಧ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಹೇಳಿದರು.
ಕುಕುನೂರು ಪಟ್ಟಣದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಪ್ಪ ಬಸಪ್ಪ ಆಚಾರ್ ಅವರ ಪರ ನಡೆದ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತ ದೇಶ ಸ್ವಾತಂತ್ರ್ಯ ಬಂದು 70 ವರ್ಷಗಳಿಂದಲೂ ಆಗದ ಅಭಿವೃದ್ಧಿ ಕಾರ್ಯಗಳು ಕಳೆದ ಒಂಬತ್ತು ವರ್ಷಗಳಲ್ಲಿ ಆಗಿದೆ.ಭಾರತ ದೇಶ 2013ರ ವಿಶ್ವದ ಆರ್ಥಿಕತೆಯಲ್ಲಿ 10ನೇ ಸ್ಥಾನದಲ್ಲಿದ್ದ ಪ್ರಸ್ತುತ 5ನೇ ಸ್ಥಾನ ಪಡೆದಿದೆ . ನೆರೆ ರಾಷ್ಟ್ರಗಳಾದ ಪಾಕಿಸ್ತಾನ,ಬಾಂಗ್ಲಾ,ಶ್ರೀ ಲಂಕಾ ದೇಶಗಳು ಆರ್ಥಿಕ ದಿವಾಳಿಯಾಗಿ ಒಂದು ತುತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ,ಕೊವಿಡ್ ಸಂದರ್ಭದಲ್ಲಿ ಭಾರತ ದೇಶ ಸ್ವಂತ ಲಸಿಕೆಯನ್ನು ಕಂಡು ಹಿಡಿದು 140ಕೋಟಿ ಭಾರತಿಯರಿಗೆ ಉಚಿತ ಡಬಲ್ ಡೊಸ್,ಬುಸ್ಟರ್, ಚುಚ್ಚುಮದ್ದು ನೀಡುವ ಮೂಲಕ ಭಾರತಿಯನ್ನು ಮತ್ತು ಹತ್ತಾರು ವಿದೇಶಗಳಿಗೆ ರಫ್ತು ಮಾಡುವ ಮೂಲಕ ಮಾನವತ್ವ ಮೇರೆದಿದೆ. ಸುಮಾರು 30 ರಿಂದ 40 ವರ್ಷಗಳ ಕಾಲ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಎಸಿ ಎಸ್ಟಿ ಲಿಂಗಾಯತ ಸಮುದಾಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿಯನ್ನು ನೀಡಿದರು,ಆದರೆ ಕಾಂಗ್ರೇಸ್ಸಿನವರು ತಾವು ಅಧಿಕಾರಕ್ಕೆ ಬಂದರೆ ನಾವು ನೀಡಿದ ಮೀಸಲಾತಿಯನ್ನು ತೆಗೆದು ಹಾಕುತ್ತೇವೆ ಎನ್ನುವ ಮೂಲಕ ಮೀಸಲಾತಿ ವಿರೋಧಿಗಳಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವಕುಮಾರ್ ನಾಗನಾಪುರ ಮಠ ಕಳಕಪ್ಪ ಕಂಬಳಿ ಮಂಜುನಾಥ್ ಗಟ್ಟೆಪ್ಪನವರ್ ಈರಣ್ಣ ಹುಬ್ಬಳ್ಳಿ ಮುಂತಾದ ಮುಖಂಡರು ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿಗಾರ - ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0