ಗೋಹತ್ಯೆ ಕಾಯ್ದೆಯನ್ನು ನಿಷೇಧ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಯನ್ನು ಸಚಿವ ಸತೀಶ್​ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರಿಗೆ ಮುಂದಿನ ಐದು ವರ್ಷಗಳ ಕಾಲ ಹೋರಾಟ ಮಾಡುವುದನ್ನು ಬಿಟ್ಟು ಇನ್ಯಾವ ಕೆಲಸವಿದೆ ಎಂದು ಪ್ರಶ್ನಿಸಿದ್ದಾರೆ.