ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಲಾಂಗ್ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಲಾಂಗ್ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಾಸನ :
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಲಾಂಗ್ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರತ್ ಹಲ್ಲೆಗೊಳಗಾದವರು. ಘಟನೆ ನಡೆದಿದೆ. ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಇನ್ನೂ ಮಿಥುನ್, ಲೋಹಿತ್, ನಟರಾಜ ಮತ್ತು ಇತರರು ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಹಿನ್ನೆಲೆ :
ಜೂನ್ 15ರಂದು ರಜೆ ಪಡೆದು ದೀಪಕ್ ಎಂಬುವರ ಮಗಳ ಹುಟ್ಟುಹಬ್ಬ ಕಾರ್ಯಕ್ರಮಕ್ಕಾಗಿ ಅವರು ಮಳಲಿ ದೇವಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದೆ.
ಚೇತನ್ ಎಂಬ ಯುವಕನಿಗೆ ದೇವಸ್ಥಾನ ಸಮೀಪದ ಕನ್ವೆನ್ಷನ್ ಹಾಲ್ ಬಳಿ ಗ್ರಾಮದ ಯುವಕರ ಗುಂಪು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡುತ್ತಿತ್ತು. ಈ ವೇಳೆ ಜಗಳ ಬಿಡಿಸಲು ಹೋಗಿದ್ದ ಶರತ್ ಮೇಲೆ ಕಲ್ಲು ಮತ್ತು ಲಾಂಗ್ ನಿಂದ ಹಲ್ಲೆ ಮಾಡಲಾಗಿದೆ. ಸ್ಥಳದಲ್ಲೇ ಶರತ್ ಕುಸಿದುಬಿದ್ದಿದ್ದಾರೆ. ಸದ್ಯ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ರಕ್ಷಾ ಶ್ರೀನಿವಾಸ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0