ಪತಿ-ಪತ್ನಿಯ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪತಿ-ಪತ್ನಿಯ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು :
ಪತಿ-ಪತ್ನಿಯ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಿವ್ಯಶ್ರೀ (26) ಪತಿಯಿಂದ ಹಲ್ಲೆಗೊಳಗಾದ ಮಹಿಳೆ. ತನ್ನ ತಂಗಿಯ ನಿಶ್ಚಿತಾರ್ಥಕ್ಕೆ ಬಂದಿಲ್ಲ ಎಂದು ಪತಿ-ಪತ್ನಿಯ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಪತಿ ಜಯಪ್ರಕಾಶ್ ಪತ್ನಿ ದಿವ್ಯಶ್ರೀಗೆ ಚಾಕುವಿನಿಂದ ಇರಿದಿದ್ದಾರೆ. ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಪತಿ ಜೈಲು ಪಾಲಾಗಿದ್ದಾನೆ.
ಜಯಪ್ರಕಾಶ್ ಹಾಗೂ ದಿವ್ಯಶ್ರೀ ಇಬ್ಬರೂ ಪರಸ್ಪರ ಪ್ರೀತಿಸಿ 2019ರಲ್ಲಿ ಮದುವೆಯಾಗಿದ್ದರು. ಪೋಷಕರ ವಿರೋಧ ಹಿನ್ನಲೆ ಬೆಂಗಳೂರಲ್ಲಿ ವಾಸವಾಗಿದ್ದರು. ಗಂಡನಿಗೆ ಅನಾರೋಗ್ಯ ಹಿನ್ನಲೆ ಮನೆಯ ಖರ್ಚೆಲ್ಲ ಪತ್ನಿಯೇ ನೋಡಿಕೊಳ್ಳುತ್ತಿದ್ದಳು. ಮೊದಲು ಮೂಡಲಪಾಳ್ಯದಲ್ಲಿ ಮನೆ ಮಾಡಿಕೊಂಡು ವಾಸವಿದ್ದ ದಂಪತಿ, ನಂತರ ಸುಂಕದಕಟ್ಟೆಗೆ ಶಿಫ್ಟ್ ಆಗಿದ್ದರು. ಇವರಿಬ್ಬರೂ ಮನೆಯ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರೂ ಇವರ ನಡುವೆ ಗಲಾಟೆ, ಜಗಳ ಸಾಮಾನ್ಯವಾಗಿತ್ತು.
ಮದುವೆ ಆದಾಗಿನಿಂದಲೂ ಜಯಪ್ರಕಾಶ್ಗೆ ತನ್ನ ಪತ್ನಿ ಮೇಲೆ ಅನುಮಾನವಿತ್ತು. ನಿನಗೆ ಅಕ್ರಮ ಸಂಬಂಧ ಇದೆ ಎಂದು ಪ್ರತಿದಿನ ಜಯಪ್ರಕಾಶ್ ಗಲಾಟೆ ಮಾಡುತ್ತಿದ್ದನಂತೆ. ಫೋನಲ್ಲಿ ಯಾರ ಯಾರ ಜೊತೆಗೆ ಮಾತನಾಡುತ್ತೀಯಾ ಎಂದು ಹಲ್ಲೆ ನಡೆಸುತ್ತಿದ್ದ. ಹೀಗೆ ಒಮ್ಮೆ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ತನ್ನ ತಂಗಿಯ ನಿಶ್ಚಿತಾರ್ಥಕ್ಕೆ ಬರಲಿಲ್ಲ ಎಂಬ ಕೋಪದಿಂದ ಜಯಪ್ರಕಾಶ್ ಚಾಕು ತೆಗೆದುಕೊಂಡು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಮುಂದಾದಾಗ ಚಾಕು ಕಾಲಿಗೆ ತಾಕಿ ದಿವ್ಯಶ್ರೀಗೆ ಗಾಯಗಳಾಗಿವೆ. ಕಾಲಿಗೆ ಗಾಯ ಆಗಿದ್ದು ಎಂಟು ಹೊಲಿಗೆ ಹಾಕಲಾಗಿದೆ.
ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0