ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಇಂದು ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ. ಇಡಿ ನೀಡಿರುವ ಸಮನ್ಸ್‌ಗಳು ಕಾನೂನುಬಾಹಿರವಾಗಿದ್ದು, ಕೇಜ್ರಿವಾಲ್ ಅವರನ್ನು ಬಂಧಿಸುವುದೊಂದೇ ಅವರ ಗುರಿ ಎಂದು ಆಪ್ ಆರೋಪಿಸಿದೆ.