ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ಮತ್ತು ಕೂಲಿ ನೀಡುವಲ್ಲಿ ಮಾಟಲದಿನ್ನಿ ಗ್ರಾಮ ಪಂಚಾಯಿತಿ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ನೆರೇಗಾ ಕಾರ್ಮಿಕರು ಗ್ರಾಮ ಪಂಚಾಯಿತಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ಮತ್ತು ಕೂಲಿ ನೀಡುವಲ್ಲಿ ಮಾಟಲದಿನ್ನಿ ಗ್ರಾಮ ಪಂಚಾಯಿತಿ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ನೆರೇಗಾ ಕಾರ್ಮಿಕರು ಗ್ರಾಮ ಪಂಚಾಯಿತಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಕೊಪ್ಪಳ :
ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ಮತ್ತು ಕೂಲಿ ನೀಡುವಲ್ಲಿ ಮಾಟಲದಿನ್ನಿ ಗ್ರಾಮ ಪಂಚಾಯಿತಿ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ನೆರೇಗಾ ಕಾರ್ಮಿಕರು ಗ್ರಾಮ ಪಂಚಾಯಿತಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಗ ಕಾರ್ಮಿಕರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು,
ಈ ವೇಳೆ ಕೂಲಿ ಕಾರ್ಮಿಕ ಗಿರಿಯಪ್ಪ ಕುರಿ ಮಾತನಾಡಿ ಒಂದು ತಿಂಗಳ ಹಿಂದೆ ಉದ್ಯೋಗ ಖಾತ್ರಿ ಯೋಜನೆ ನಡೆಸಿದ್ದರು, ಮತ್ತೆ ಕೆಲವು ದಿನಗಳ ನಂತರ ನೆರಗ ಕಾಮಗಾರಿಯನ್ನು ಪುನಃ ಪ್ರಾರಂಭಿಸುವುದಾಗಿ ಹೇಳಿ ಬಹಳ ದಿನಗಳ ಕಾಲ ಇದ್ದರೂ ಕೂಡ ನೆರೇಗಾ ಕೆಲಸವನ್ನು ನೀಡಿಲ್ಲ ನಮಗೆ ಕೆಲಸವಿಲ್ಲದೆ ಜೀವನ ನಡೆಸಲು ಸಮಸ್ಯೆ ಎದರುರಾಗಿದ್ದರಿಂದ ರೈತಾಪಿ ವರ್ಗ ಕಂಗಲಾಗಿದ್ದಾರೆ. ಹಿಂದೆ ಮಾಡಿದ ಕಾಮಗಾರಿಗಳಿಗೂ ಸಹ ಸರಿಯಾದ ಕೂಲಿ ನೀಡಿಲ್ಲ, ಸರಕಾರ ತಕ್ಷಣವೇ ಉದ್ಯೋಗ ಖಾತರಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸದಿದ್ದರೆ ಪ್ರತಿಯೊಬ್ಬರ ಸಂಕಷ್ಟ ಹೆಚ್ಚಾಗಲಿದೆ , ಪ್ರತಿಯೊಂದು ಕುಟುಂಬಕ್ಕೂ ಅವರು ಬಯಸುವಷ್ಟು ದಿನ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಒದಗಿಸಬೇಕು. ಎಲ್ಲ ಕೆಲಸಗಾರರಿಗೆ ಸಕಾಲದಲ್ಲಿ ಸರಿಯಾದ ಕೂಲಿ ಪಾವತಿ ಮಾಡಬೇಕು. ಸಕಾಲದಲ್ಲಿ ಉದ್ಯೋಗ ಒದಗಿಸಲಾಗದ ಸಂದರ್ಭಗಳಲ್ಲಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಗ್ರಾಮ ಪಂಚಾಯತಿಗೆ ಅಥವಾ ತಾಲೂಕು ಪಂಚಾಯತಿಗೆ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಿ ಸ್ವೀಕತಿ ಪತ್ರ ನೀಡಬೇಕು. ವಾರಕ್ಕೊಮ್ಮೆ ಎನ್.ಎಂ.ಆರ್ ಗಳನ್ನು ಮುಕ್ತಾಯಗೊಳಿಸಿ ವಾರಕ್ಕೊಮ್ಮೆ ಕೆಲಸಗಾರರಿಗೆ ಕೂಲಿ ಪಾವತಿ ಮಾಡಬೇಕು. ಕೂಲಿ ಪಾವತಿ ವಿಳಂಬವಾದರೆ 936 ರ ವೇತನ ಪಾವತಿ ಕಾಯ್ದೆಯ ಪ್ರಕಾರ ವಿಳಂಬ ಕೂಲಿ ಪಾವತಿ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0