ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರು. ಹಂಪಿಯ ವೈಭವವನ್ನು ಕಂಡು ಬೆರಗಾಗಿ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ತಾಲೂಕ ಅಕ್ಷರ ದಾಸೋಹ ಸಮಿತಿಯ ಸಹಾಯಕ ನಿರ್ದೇಶಕ ಹನುಮಂತಪ್ಪ ಹೇಳಿದರು.
ಕೊಪ್ಪಳ :
ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರು. ಹಂಪಿಯ ವೈಭವವನ್ನು ಕಂಡು ಬೆರಗಾಗಿ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ತಾಲೂಕ ಅಕ್ಷರ ದಾಸೋಹ ಸಮಿತಿಯ ಸಹಾಯಕ ನಿರ್ದೇಶಕ ಹನುಮಂತಪ್ಪ ಹೇಳಿದರು.
ಕೊಪ್ಪಳ ನಗರದ ತಾಲೂಕ ಪಂಚಾಯತಿ ಕಾರ್ಯಾಲಯದ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನುಮಂತಪ್ಪ ಮಾತನಾಡುತ್ತಾ ಕೆಂಪೇಗೌಡರು ಪಾಳೇಗಾರರ ವಂಶದ ಜನಪರ ಒಂದಿದ ಪಾಳೆಗಾರರಾಗಿದ್ದು ವಿಜಯನಗರ ಸಾಮ್ರಾಜ್ಯದ ಸಾಮಂತರಾಜ್ಯವಾದ ಯಲಹಂಕ ನಾಡಿನ ಪಾಳೇಗಾರರಾಗಿ ಇತಿಹಾಸದಲ್ಲಿ ತಮ್ಮದೇ ಆದ ಕುರುಹು ಬಿಟ್ಟು ಹೋಗಿದ್ದಾರೆ ಅಂತವರ ಜಯಂತಿ ಆಚರಿಸುತ್ತಿರುವ ನಾವೇ ಧನ್ಯರಾಗಿದ್ದು ಅವರ ತತ್ವದರ್ಶನಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ತಾಲೂಕ ಪಂಚಾಯಿತಿ ವ್ಯವಸ್ಥಾಪಕೆ ಲಲಿತಾ ಸುರಳ, ಸೇರಿದಂತೆ ತಾಲೂಕ ಪಂಚಾಯತಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ನಿಂಗರಾಜ ದೊಡ್ಡಮನಿ
ಠೀಕೆಗಳು 0