ಕುಕನೂರು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 15
ಗ್ರಾಮ ಪಂಚಾಯತಿಗಳ ಕೂಲಿಕಾರರಿಗೆ ನಿರಂತರ ಕೆಲಸ ನೀಡಿ 45 ದಿನಗಳಲ್ಲಿ 1,02,144 ಮಾನವ ದಿನ ಸೃಷ್ಟಿ ಮಾಡಿ ಗುಳೆ ಹೊಗುವುದನ್ನು ತಪ್ಪಿಸಿ ನೈಸರ್ಗಿಕ ಸಂಪನ್ಮೂಲಗಳನ್ನು ವೃದ್ಧಿಸಲು ಸಹಕಾರಿ ನೆರೇಗಾ ಕಾಮಗಾರಿಗಳು ಸಹಾಯಕ ವಾಗಿವೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.
ಕುಕನೂರು :
ಕುಕನೂರು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 15 ಗ್ರಾಮ ಪಂಚಾಯತಿಗಳ ಕೂಲಿಕಾರರಿಗೆ ನಿರಂತರ ಕೆಲಸ ನೀಡಿ 45 ದಿನಗಳಲ್ಲಿ 1,02,144 ಮಾನವ ದಿನ ಸೃಷ್ಟಿ ಮಾಡಿ ಗುಳೆ ಹೊಗುವುದನ್ನು ತಪ್ಪಿಸಿ ನೈಸರ್ಗಿಕ ಸಂಪನ್ಮೂಲಗಳನ್ನು ವೃದ್ಧಿಸಲು ಸಹಕಾರಿ ನೆರೇಗಾ ಕಾಮಗಾರಿಗಳು ಸಹಾಯಕವಾಗಿವೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ 15 ಗ್ರಾಮ ಪಂಚಾಯತಿಗಳು ಇದ್ದು, ವಾರ್ಷಿಕವಾಗಿ ಅಂದಾಜು 4,10,000 ಮಾನವ ದಿನಗಳ ಗುರಿ ಹೊಂದಲಾಗಿತ್ತು. ಅದರಂತೆ ಗ್ರಾಮ ಪಂಚಾಯತಿಗಳಲ್ಲಿ ಕೂಲಿಕಾರರಿಗೆ ನಿರಂತರ ಕೆಲಸ ನೀಡಿ ಕೇವಲ 45 ದಿನಗಳಲ್ಲಿ 1,02,144 ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಗ್ರಾಮೀಣ ಪ್ರದೇಶದಲ್ಲಿ ಕೂಲಿ ಕೆಲಸ ಬಯಸುವ ಬಡ ಕೂಲಿಕಾರರಿಗೆ, ಅಕುಶಲ ಕೂಲಿ ಕೆಲಸ ಒದಗಿಸಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ನೀಡಿ ತಾಲೂಕಿನ ಅಭಿವೃದ್ಧಿಗೆ ಕಾರಣವಾಗಿದೆ. ವೈಯಕ್ತಿಕ ಕಾಮಗಾರಿಗಳಾದ ರೈತರ ಹೊಲಗಳಿಗೆ ಬದು ನಿರ್ಮಾಣ, ಕೃಷಿ ಹೊಂಡ, ದನದ ದೊಡ್ಡಿ, ಮೇಕೆ ಶೆಡ್ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗಳನ್ನು ಗ್ರಾಮ ಪಂಚಾಯತಿ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಂಚಾಯತ್ ರಾಜ್ ಇಲಾಖೆಗಳಿಂದ ಕೆಲಸ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಗ್ರಾಮೀಣ ಪ್ರದೇಶದ ಜನರು ಕೆಲಸಕ್ಕಾಗಿ ನಗರ, ಪಟ್ಟಣಗಳಿಗೆ ಗುಳೆ ತಪ್ಪಿಸಿ,ಗ್ರಾಮದಲ್ಲಿಯೇ ಕೆಲಸ ನೀಡಿ, ಸಾಮಾಜಿಕ ಸಾಮರಸ್ಯವನ್ನು ಕಾಪಾಡುವುದರ ಜೋತೆಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಕ್ಷಿಯಾಗಿದೆ.
ತಾಲೂಕಿನಲ್ಲಿ ಅಮೃತ ಸರೋವರ, ಶಾಲಾ ಅಭಿವೃದ್ಧಿ ಕಾಮಗಾರಿ, ಗ್ರಾಮೀಣ ಉದ್ಯಾನವನದಂತಹ ಹಲವಾರು ಕಾಮಗಾರಿಗಳನ್ನು ಮಾಡಿದ್ದರಿಂದ ರಾಷ್ಟ್ರ ಮಟ್ಟದಲ್ಲಿ ಸ್ಕಾಚ್ ಪ್ರಶಸ್ತಿ ಕೊಪ್ಪಳ ಜಿಲ್ಲೆಗೆ ಲಭಿಸಿದೆ.
ಈ ವರ್ಷವೂ ಸಹ ಗ್ರಾಮಸ್ಥರ ಬೇಡಿಕೆಗಳ ಅನುಸಾರ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಕೂಲಿಕಾರರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗಾಗಿ ಕೆಲಸ ನೀಡಿ, ಕೆಲಸ ಮುಕ್ತಾಯವಾದ 8 ದಿನಗಳ ಒಳಗಾಗಿ ಕೂಲಿ ಪಾವತಿ ಮಾಡಲಾಗುತ್ತಿದೆ. ಅಲ್ಲದೇ ಪ್ರತಿಯೊಂದು ಕಾಮಗಾರಿಯ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆ ಮಾಡಿ ಕೂಲಿಕಾರರ ಯೋಗಕ್ಷೇಮವನ್ನೂ ಸಹ ಗ್ರಾಮ ಪಂಚಾಯತಿಯಿಂದ ಮಾಡಲಾಗುತ್ತಿದೆ.
ಇದರಿಂದಾಗಿ ಕೇವಲ 45 ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಾನವ ದಿನಗಳನ್ನು ಸೃಷ್ಠಿ ಮಾಡಿ ನೈಸರ್ಗಿಕ ಸಂಪನ್ಮೂಲಗಳನ್ನು ಅಭಿವೃದ್ಧಿ ಪಡಿಸುವಲ್ಲಿ ತಾಲೂಕಿನ ಗ್ರಾಮ ಪಂಚಾಯತಿಗಳು ಪ್ರಮುಖ ಪಾತ್ರ ವಹಿಸಿವೆ. ಇದಕ್ಕೆಲ್ಲ ಕಾರಣರಾದ ಪಿ.ಡಿ.ಓ ಮತ್ತು ನರೇಗಾ ತಾಂತ್ರಿಕ ವರ್ಗಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇನ್ನು ಹೆಚ್ಚು ಕೂಲಿ ಕಾರ್ಮಿಕರು ಯೋಜನೆಯ ಲಾಭ ಪಡೆಯಲು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.
ನಿಂಗರಾಜ ದೊಡ್ಡಮನಿ
ಠೀಕೆಗಳು 0