ತಾಲೂಕು ವ್ಯಾಪ್ತಿಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಾದ ಅಡರಕಟ್ಟಿ, ಪು.ಬಡ್ನಿ ಮತ್ತು ನೆಲೊಗಲ್ಲ ಗ್ರಾಮದಲ್ಲಿಯ ಮತದಾನ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಸುಶೀಲಾ ಬಿ. ಅವರು ಮಂಗಳವಾರ ಭೇಟಿ ನೀಡಿ ಚುನಾವಣೆ ಸಿದ್ದತೆ ಕುರಿತು ಪರಿಶೀಲಿಸಿದರು.
ತಾಲೂಕು ವ್ಯಾಪ್ತಿಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಾದ ಅಡರಕಟ್ಟಿ, ಪು.ಬಡ್ನಿ ಮತ್ತು ನೆಲೊಗಲ್ಲ ಗ್ರಾಮದಲ್ಲಿಯ ಮತದಾನ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಸುಶೀಲಾ ಬಿ. ಅವರು ಮಂಗಳವಾರ ಭೇಟಿ ನೀಡಿ ಚುನಾವಣೆ ಸಿದ್ದತೆ ಕುರಿತು ಪರಿಶೀಲಿಸಿದರು.
ಲಕ್ಷ್ಮೇಶ್ವರ :
ತಾಲೂಕು ವ್ಯಾಪ್ತಿಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಾದ ಅಡರಕಟ್ಟಿ, ಪು.ಬಡ್ನಿ ಮತ್ತು ನೆಲೊಗಲ್ಲ ಗ್ರಾಮದಲ್ಲಿಯ ಮತದಾನ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಸುಶೀಲಾ ಬಿ. ಅವರು ಮಂಗಳವಾರ ಭೇಟಿ ನೀಡಿ ಚುನಾವಣೆ ಸಿದ್ದತೆ ಕುರಿತು ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಮೇ 10 ರಂದು ಮುಂಜಾನೆ 7 ರಿಂದ ಸಂಜೆ 6 ರವರೆಗೂ ಮತದಾನಕ್ಕೆ ಸಮಯ ನಿಗದಿ ಪಡಿಸಲಾಗಿದೆ. ಚುನಾವಣೆ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿ ಮತದಾರರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಬೇಸಿಗೆ ಸಮಯವಾದ್ದರಿಂದ ಮತದಾರರಿಗೆ ಅಗತ್ಯವಾಗಿ ನೀರು, ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ವಯೋವೃದ್ದರು, ವಿಕಲಚೇತನರಿಗೆ ಆದ್ಯತೆ ಮೇಲೆ ಮತದಾನಕ್ಕೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ವಾಗೀಶ ಶಿವಾಚಾರ್ಯ ಮಾತನಾಡಿ, ಮತದಾನ ಪ್ರಕ್ರಿಯೆಯಲ್ಲಿ ಸಮಸ್ಯೆಗೂ ಅವಕಾಶವಾಗದಂತೆ ನೋಡಿಕೊಳ್ಳಬೇಕು. ಭದ್ರತೆ, ಚುನಾವಣೆ ಕೆಲಸಕ್ಕೆ ಬರುವ ಸಿಬ್ಬಂದಿಗೆ ಮೂಲಸೌಕರ್ಯ ಒದಗಿಸುವುದರತ್ತ ಗಮನ ಹರಿಸುವಂತೆ ಸ್ಥಳದಲ್ಲಿದ್ದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಂ.ವಿ. ಬಡಿಗೇರ, ಸಹಾಯಕ ನಿರ್ದೇಶಕರಾದ (ಗ್ರಾಉ) ಕೃಷ್ಣ ಧರ್ಮರ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸವಿತಾ ಸೋಮಣ್ಷವರ, ಎಂ.ಆರ್. ಮಾದರ, ಚಂದ್ರಶೇಖರ ಹಳ್ಳಿ, ಗ್ರಾಪಂ ಸಿಬ್ಬಂದಿ ಇದ್ದರು.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0