ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ನೆರೇಗಾ ಕಾಮಗಾರಿ ನಡೆಯುವ ಸ್ಥಳದಲ್ಲಿ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೆರೇಗಾ ಕಾರ್ಮಿಕರು ತಪ್ಪದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ತಿಳಿಸಿದರು
ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ನೆರೇಗಾ ಕಾಮಗಾರಿ ನಡೆಯುವ ಸ್ಥಳದಲ್ಲಿ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೆರೇಗಾ ಕಾರ್ಮಿಕರು ತಪ್ಪದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ತಿಳಿಸಿದರು
ಕುಕನೂರ :
ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ನೆರೇಗಾ ಕಾಮಗಾರಿ ನಡೆಯುವ ಸ್ಥಳದಲ್ಲಿ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೆರೇಗಾ ಕಾರ್ಮಿಕರು ತಪ್ಪದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ತಿಳಿಸಿದರು
ಕುಕನೂರ ತಾಲೂಕಿನ ನೆಲಜೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಲಜೇರಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಇಂದು ಆರೋಗ್ಯ ತಪಾಸಣಾ ಶಿಬಿರವನ್ನು ಮತ್ತು ರೋಜಗಾರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನರೇಗಾ ಕೂಲಿಕಾರರು ಬಹಳಷ್ಟು ಶ್ರಮದಿಂದ ಪ್ರತಿದಿನ ಕೆಲಸ ಮಾಡುತ್ತಿರುತ್ತಾರೆ. ಅಂತ ಕೆಲಸ ಮಾಡುವ ಕೂಲಿಕಾರರು ಆರೋಗ್ಯ ತಪಾಸಣೆಗಾಗಿ ಆರೋಗ್ಯ ಕೇಂದ್ರಗಳಿಗೆ ಹೋಗುವ ಬದಲಾಗಿ ಕಾಮಗಾರಿ ಸ್ಥಳದಲ್ಲಿಯೇ ಆರೋಗ್ಯ ಇಲಾಖೆ ಮತ್ತು KHPT ತಾಂತ್ರಿಕ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮುಖ್ಯವಾಗಿ ಸಕ್ಕರೆ ಖಾಯಿಲೆ, ಬಿ.ಪಿ. ಟಿಬಿ ಸೇರಿದಂತೆ ಎಲ್ಲಾ ಸಣ್ಣ ಸಣ್ಣ ಆರೋಗ್ಯ ಸಂಬಂಧಿ ಖಾಯಿಲೆಗಳಿಗೆ ಸ್ಥಳದಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ. ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜುಲೈ-1 ರಿಂದ ಆಧಾರ ಲಿಂಕ್ ಆದ ಕೂಲಿಕಾರರ ಬ್ಯಾಂಕ್ ಖಾತೆಗಳ ಮಾತ್ರ ಕೂಲಿ ಸರಿಯಾಗಿ ಪಾವತಿಯಾಗುತ್ತದೆ ಅದಕ್ಕಾಗಿ ಎಲ್ಲರೂ ಆಧಾರ ಸಂಖ್ಯೆಯನ್ನು ಬ್ಯಾಂಕ್ ಖಾತೆಗಳಿಗೆ ಹೊಂದಾಣಿಕೆ ಮಾಡಿ ABPS ಮಾಡಿಸಿಕೊಳ್ಳಲು ಕರೆ ನೀಡಿದರು.
ವಿಶೇಷತೆ:ಕಾಮಗಾರಿ ಸ್ಥಳದಲ್ಲಿ 1100 ಕೂಲಿಕಾರರು ಆರೋಗ್ಯ ತಪಾಸಣೆ ಮಾಡಿಸಲಾಯಿತು
ಸ್ಥಳದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ನೀಲಂ ಚಳಗೇರಿ, ಆರೋಗ್ಯ ಅಧಿಕಾರಿಗಳಾದ ಈಶ್ವರ್ ರಾಠೋಡ, ಮಂಗಳಾ ಬಸವೇಶ್ವರ ಜತ್ತಿ, ಕೆ.ಎಚ್.ಪಿ.ಟಿ ಸಂಯೋಜಕ ರಫಿ, ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ, ಆಶಾ ಕಾರ್ಯಕರ್ತೆಯರು, ಗ್ರಾಮ ಕಾಯಕ ಮಿತ್ರರು, ಕಾಯಕ ಬಂಧುಗಳು ಕೂಲಿಕಾರರು ಹಾಜರಿದ್ದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0