ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ಚುನಾವಣಾಧಿಕಾರಿ ಕಾವ್ಯರಾಣಿ
ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ಚುನಾವಣಾಧಿಕಾರಿ ಕಾವ್ಯರಾಣಿ
ಕುಕನೂರ :
ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ಚುನಾವಣಾಧಿಕಾರಿ ಕಾವ್ಯರಾಣಿ ಕೆವಿ ಹೇಳಿದರು.
ಯಲಬುರ್ಗಾ ವಿಧಾನಸಭಾ ಕ್ಷೇತ್ರ 63 ಫೇಸ್ ವ್ಯಾಪ್ತಿಯ ಕುಕನೂರು ಪಟ್ಟಣದಲ್ಲಿ ಶನಿವಾರ ಸಂಜೆ ಮತದಾರರಿಗೆ ಮತದಾನದ ಕುರಿತು ಮಾಹಿತಿ ನೀಡುವ ವಾಕಥಾನ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮವನ್ನು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕೆ ವಿ ಹಾಗೂ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕ ಸ್ವೀಟ್ ಸಮಿತಿ ಅಧ್ಯಕ್ಷರಾದ ರಾಮಣ್ಣ ದೊಡ್ಡಮನಿ ಅವರ ಜೊತೆಗೂಡಿ ಹಸಿರು ನಿಶಾನೆ ತೋರಿಸುವುದರೊಂದಿಗೆ ವಾಕ್ ಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ವೇಳೆಯಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆ ಅಧಿಕಾರಿ ಕಾವ್ಯ ರಾಣಿ ಕೆಬಿ ಮಾತನಾಡುತ್ತಾ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ 2, 23,036 ಅರ್ಹ ಮತದಾರರು ಇದ್ದು ಎಲ್ಲರೂ ತಮ್ಮ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಮತದಾನ ಸಂವಿಧಾನದತ್ತವಾಗಿ ದೊರೆ ಅಮೂಲ್ಯ ವರವಾಗಿದ್ದು ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕಾಗಿ ನೈತಿಕ ಮತದಾನವನ್ನು ಬೆಂಬಲಿಸಿ ಕಡ್ಡಾಯ ಮತದಾನ ನೀಡುವಂತೆ ಕರೆ ನೀಡಿದರು.
ಮತದಾನ ಜಾಗೃತಿ ಮೂಡಿಸುವ ವಾಕಥಾನ್ ಕಾರ್ಯಕ್ರಮವು ಪಟ್ಟಣದ ಪಟ್ಟಣ ಪಂಚಾಯತಿ ಆವರಣದಲ್ಲಿ ಪ್ರಾರಂಭಗೊಂಡು ವೀರಭದ್ರಪ್ಪ ರಥ ಬಸ್ ನಿಲ್ದಾಣದ ಮೂಲಕ ಹಾದು ಅಂಬೇಡ್ಕರ್ ವೃತ್ತದ ವರೆಗೆ ಸಾಗಿ ಸಮಾರೋಪ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಮೇಣದ ಬತ್ತಿ ಹಿಡಿದುಕೊಂಡು ವಾಕಥಾನ್ ಜರುಗಿಸಿದ್ದು ಸಾರ್ವಜನಿಕರ ಗಮನ ಸ್ಥಳದದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಾದ ಪ್ರಕಾಶ ಬಾಗಳೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಶಿಕ್ಷಕರು,ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಬಿ.ಎಲ್.ಓ ಗಳು ನರೇಗಾ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಪ್ರತಿನಿಧಿಗಳು, ತಾಲೂಕ ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಪೌರ ಕಾರ್ಮಿಕರು ಹಾಜರಿದ್ದರು.
ವರದಿಗಾರ - ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0