2023ರ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ
2023ರ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ
ಕುಕನೂರು :
2023ರ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಈ ಬಾರಿ ಬಡವರ ಪರ ಸರ್ಕಾರ ರಚನೆಯಾಗಿದ್ದು ಇಂದಿನಿಂದ ರಾಜ್ಯದ ಅಭಿವೃದ್ಧಿ ಪರ್ವ ಶುರುವಾಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ತಾಲೂಕು ಅಧ್ಯಕ್ಷರು ಹಾಗೂ ಕುಕನೂರು ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಇಮ್ರಾನ್ ನಿಟ್ಟಾಲಿ ಹೇಳಿದರು.
ತಾಲೂಕಿನ ನಿಟ್ಟಾಲಿ ಗ್ರಾಮದಲ್ಲಿ ಮಾತನಾಡಿದ ಇಮ್ರಾನ್ ಅವರು ಕಳದೈದು ವರ್ಷಗಳಿಂದ ಬಿಜೆಪಿ ಸರಕಾರದ ದುರಾಡಳಿತ, ಭ್ರಷ್ಟಾಚಾರ, ಅಗತ್ಯ ವಸ್ತುಗಳ ಬೆಲೆ ಏರಿಕೆ, ದಿನಸಿ ವಸ್ತುಗಳು ಮತ್ತು ಗ್ಯಾಸ್ ಬೆಲೆ ಹೆಚ್ಚಾಗಿದ್ದು ಈ ಎಲ್ಲಾ ಕಾರಣಗಳಿಂದ ರೋಷಿ ಹೋದ ರಾಜ್ಯದ ಜನರು ಬಿಜೆಪಿಯನ್ನು ತಿರಸ್ಕರಿಸಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಆರಿಸಿದ್ದಾರೆ ಈ ಬಾರಿ ನಮ್ಮ ಪ್ರಣಾಳಿಕೆಯಲ್ಲಿರುವ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ತರಲಿದ್ದೇವೆ, ಇಂದು ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿರುವುದು ತುಂಬಾ ಸಂತೋಷದ ಸುದ್ದಿಯಾಗಿದ್ದು ಅವರು 2013 ರಿಂದ 2018 ರ ವರೆಗೆ 5 ವರ್ಷಗಳ ಕಾಲ ಸುದೀರ್ಘ ರಾಜವನ್ನಾಳಿ ರಾಜ್ಯವನ್ನು ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡಿದ್ದರು.
ತಮ್ಮ ಆಡಳಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ,ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿಭಾಗ್ಯ, ಸಾಲ ಮನ್ನಾ, ಆರೋಗ್ಯ ಭಾಗ್ಯ, ವಸತಿ ಭಾಗ್ಯ, ಇನ್ನಿತರ ಯೋಜನೆಗಳ ಜೋತೆ ಆರ್ಥಿಕ, ಸಾಮಾಜಿಕ ,ಶೈಕ್ಷಣಿಕ ಸಮಾನತೆಯನ್ನು ಪ್ರತಿಯೊಬ್ಬ ಪ್ರಜೆಗಳಿಗೂ ನೀಡಿದ್ದಾರೆ, ಸಾವಿರಾರು ಕೋಟಿ ರೂಪಾಯಿಗಳು ಅನುದಾನ ಬಿಡುಗಡೆ ಮಾಡಿ ಗ್ರಾಮೀಣ ಪ್ರದೇಶದ ಹಳ್ಳಿಗಳ ರಸ್ತೆ ಮೂಲಭೂತ ಸೌಕರ್ಯ ಕುಡಿಯುವ ನೀರು ಒದಗಿಸಿದ್ದಾರೆ ಈ ಬಾರಿಯೂ ಕೂಡ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದು ಸಮರ್ಥ ಆಡಳಿತವನ್ನು ನೀಡಲಿದ್ದಾರೆ ಅವರ ಆಡಳಿತದಲ್ಲಿ ಕರ್ನಾಟಕ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ಹೇಳಿದರು.
ಅಭಿವೃದ್ಧಿ ಹರಿಕಾರ ,ಬಡವರ ಬಂಧು ,ಹಿಂದುಳಿದ ತಾಲೂಕನ್ನೂ ಅಭಿವೃದ್ಧಿ ಕಡೆಯ ಕೊಂಡೊಯ್ದ ಯಶಸ್ವಿ ನಾಯಕ ಮಾಜಿ ಮಂತ್ರಿಗಳು ಯಲಬುರ್ಗಾ ಕ್ಷೇತ್ರದ ನೂತನ ಶಾಸಕರು ಬಸವರಾಜ ರಾಯರೆಡ್ಡಿಯವರು ಸತತ 30 ವರ್ಷಗಳ ರಾಜಕೀಯ ಅನುಭವ ಇದೆ,ಕೊಪ್ಪಳ ಜಿಲ್ಲೆಯ ಏಳಿಗೆಗೆ, ರಾಜ್ಯದ ಹಲವು ಅಭಿವೃದ್ಧಿ ಕಾರ್ಯಗಳಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ, 2018 ರಲ್ಲಿ ಉನ್ನತ ಶಿಕ್ಷಣ ಸಚಿವರು ಇದ್ದ ವೇಳೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಉಚಿತ ಲ್ಯಾಪ್ ಟಾಪ್ ವಿತರಿಸಿದ್ದಾರೆ ಕುಕನೂರು ಯಲಬುರ್ಗಾ ತಾಲೂಕುಗಳ ಸರ್ವಾಂಗಿನ ಅಭಿವೃದ್ಧಿಗಾಗಿ ಪಣತೊಟ್ಟಿರುವ ರಾಯರೆಡ್ಡಿ ಅವರಿಗೆ ಕ್ಯಾಬಿನೆಟ್ ದರ್ಜೆ ಮಂತ್ರಿಯನ್ನಾಗಿ ಮಾಡಬೇಕೆಂದು ಈ ಮೂಲಕ ಹೈಕಮಾಂಡ್ ಗೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0