ಯಲಬುರ್ಗಾ ತಾಲೂಕಿನ ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿಯವರಿಗೆ ಸಿದ್ದರಾಮಯ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕುಕನೂರು ತಾಲೂಕು ರಾಜೂರು ಗ್ರಾಮದ ಕಾಂಗ್ರೆಸ್ ಮುಖಂಡ ದೇವೇಂದ್ರಪ್ಪ ಬಡಿಗೇರ್ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ ಕ್ರಾಂತಿಮಾರ್ಗ ಪತ್ರಿಕೆಯ ಮುಖಾಂತರ ಮನವಿ ಮಾಡಿಕೊಂಡರು.
ಕುಕನೂರು :
ಯಲಬುರ್ಗಾ ತಾಲೂಕಿನ ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿಯವರಿಗೆ ಸಿದ್ದರಾಮಯ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕುಕನೂರು ತಾಲೂಕು ರಾಜೂರು ಗ್ರಾಮದ ಕಾಂಗ್ರೆಸ್ ಮುಖಂಡ ದೇವೇಂದ್ರಪ್ಪ ಬಡಿಗೇರ್ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿಕೊಂಡರು
ತಾಲೂಕಿನ ರಾಜೂರು ಗ್ರಾಮದ ಸೋಂಪುರ ವೀರಭದ್ರಪ್ಪನವರ ಮೀಲ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಸವರಾಜ ರಾಯರೆಡ್ಡಿ ಅವರು ರಾಜ್ಯ ಕಂಡ ಪ್ರಭುದ್ಧ ರಾಜಕಾರಣಿಯಾಗಿದ್ದು ಐದು ಬಾರಿ ಯಶಸ್ವಿ ಶಾಸಕರಾಗಿ ಆರನೇ ಬಾರಿ ಆಯ್ಕೆಯಾಗಿದ್ದಾರೆ, ಸಂಸದರಾಗಿ ಒಂದು ಬಾರಿ ಆಯ್ಕೆಯಾಗಿದ್ದಾರೆ ಅವರು ರಾಜ್ಯ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಮಹಾನ ಅನುಭವಿ ಮತ್ತು ಆರ್ಥಿಕ ತಜ್ಞತೆಯನ್ನು ಹೊಂದಿದ್ದು ಇಂತಹ ಪರಿಪೂರ್ಣ ರಾಜಕಾರಣಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಿದಾಗ ಯಲಬುರ್ಗಾ ವಿಧಾನಸಭಾ ಕ್ಷೇತ್ರದೊಂದಿಗೆ ರಾಜ್ಯವು ಸಹ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಂತ್ರಿ ಮಂಡಲದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಶೀಘ್ರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಿ ಅಭಿವೃದ್ಧಿ ದಿಕ್ಕಿನತ್ತ ರಾಜ್ಯ ಮತ್ತು ಕ್ಷೇತ್ರ ಸಾಗುವಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳನ್ನು ಆಗ್ರಪಡಿಸುವುದಾಗಿ ಹೇಳಿದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಯಾವ ಜಿಲ್ಲೆಯನ್ನು ಇಲ್ಲದಷ್ಟು ವಸತಿ ಶಾಲೆಗಳನ್ನು ಕ್ಷೇತ್ರಕ್ಕೆ ನೀಡಿದ ಕೀರ್ತಿ ಹಾಗೂ ಸಾಧನೆ ಬಸವರಾಜ ರಾಯರೆಡ್ಡಿ ಅವರದ್ದು ಕ್ಷೇತ್ರದಲ್ಲಿ ಎಲ್ಲಾ ಇಲಾಖೆಯ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವ ಬಸವರಾಜ ರಾಯರೆಡ್ಡಿಯವರು ಕ್ಷೇತ್ರದ ತಳಕಲ್ ಗ್ರಾಮದಲ್ಲಿ ಇಂಜಿನಿಯರ್ ಕಾಲೇಜ್ ಹಾಗೂ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಿದ ಹೆಗ್ಗಳಿಕೆ ಅವರದ್ದು ಇದರೊಂದಿಗೆ ಇನ್ನೂ ಸಾಕಷ್ಠು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರಕ್ಕೆ ನೀಡಿದ್ದು ಇನ್ನೂ ಹಲವಾರು ಕಾರ್ಯಗಳನ್ನು ಮಾಡಬೇಕಾದ ಅವಶ್ಯಕತೆ ಇದ್ದು ಈ ಎಲ್ಲಾ ಕಾರಣಗಳಿಂದಾಗಿ ಕ್ಷೇತ್ರ ಮತ್ತು ರಾಜ್ಯದ ಸರ್ವತೋಮುಖ ಏಳಿಗೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮನವಿಯೊಂದಿಗೆ ಆಗ್ರಹಪಡಿಸಲಾಗುವುದು ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ದೇವರೆಡ್ಡಿ ಮುಂದಿನಮನಿ, ಬಸರೆಡ್ಡಪ್ಪ ಸೋಂಪುರ, ಭೀಮರೆಡ್ಡಿ ಮಾದಿನೋರ, ಫಕೀರ ಸಾಬ ನದಾಫ್, ವೀರಭದ್ರಪ್ಪ ಸೋಂಪುರ, ಮುದಿಯಪ್ಪ ಕವಲೂರು, ಶಿವರಾಜ್ ದೊಡ್ಮನಿ, ವಿಜಯ್ ಮಾದನೂರು, ಬಸವರಾಜ ವಾಲ್ಮೀಕಿ, ವಿರುಪಾಕ್ಷಿ ದೊಡ್ಮನಿ, ದೇವರಾಜ ಕುದುರೆಮೋತಿ, ಶರಣಪ್ಪ ಬಾವಿಮನಿ ಇನ್ನಿತರರು ಪಾಲ್ಗೊಂಡಿದ್ದರು.
ನಿಂಗರಾಜ ದೊಡ್ಡಮನಿ
ಠೀಕೆಗಳು 0