ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಜಾ ಸಂಪುಟದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನವನ್ನು ನೀಡಬೇಕೆಂದು ಈಡಿಗ ಸಮಾಜದ ತಾಲೂಕು ಅಧ್ಯಕ್ಷರು ಮತ್ತು ಕಾಂಗ್ರೆಸ್ ಮುಖಂಡ ವೆಂಕಟೇಶ್ ಈಳಗೇರ್ ಒತ್ತಾಯಿಸಿದರು
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಜಾ ಸಂಪುಟದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನವನ್ನು ನೀಡಬೇಕೆಂದು ಈಡಿಗ ಸಮಾಜದ ತಾಲೂಕು ಅಧ್ಯಕ್ಷರು ಮತ್ತು ಕಾಂಗ್ರೆಸ್ ಮುಖಂಡ ವೆಂಕಟೇಶ್ ಈಳಗೇರ್ ಒತ್ತಾಯಿಸಿದರು
ಕುಕನೂರು :
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಜಾ ಸಂಪುಟದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನವನ್ನು ನೀಡಬೇಕೆಂದು ಈಡಿಗ ಸಮಾಜದ ತಾಲೂಕು ಅಧ್ಯಕ್ಷರು ಮತ್ತು ಕಾಂಗ್ರೆಸ್ ಮುಖಂಡ ವೆಂಕಟೇಶ್ ಈಳಗೇರ್ ಒತ್ತಾಯಿಸಿದರು
ಕುಕನೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಸವರಾಜ ರಾಯರೆಡ್ಡಿ ರಾಜ್ಯ ರಾಜಕಾರಣದಲ್ಲಿ ಅವರಿಗೆ 30 ವರ್ಷಗಳ ಅನುಭವಿದ್ದು ಒಬ್ಬ ಪ್ರಭುದ್ಧ ರಾಜಕಾರಣಿಯಾಗಿದ್ದಾರೆ ಅವರೊಬ್ಬ ರಾಜಕಾರಣದ ಗ್ರಂಥಾಲಯ ಇದ್ದಂತೆ ರಾಜಕಾರಣದ ಯಾವುದೇ ವಿಷಯದ ಸಮಗ್ರ ಮಾಹಿತಿ ಅವರಿಂದ ಪಡೆಯಬಹುದಾಗಿದ್ದು ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡ ಈ ಮಾತನ್ನು ಒಪ್ಪಿಕೊಂಡಿದ್ದು ಅವರಿಗೆ ಯಾವುದೇ ಖಾತೆಯನ್ನು ಕೊಟ್ಟರು ಹಾಗೂ ಎಷ್ಟೇ ಖಾತೆಗಳನ್ನು ಕೊಟ್ಟರು ಸಹ ಸುಲಭವಾಗಿ ಯಶಸ್ವಿಯಾಗಿ ನಿಭಾಯಿಸಬಲ್ಲ ರಾಜಕಾರಣಿ ಆಗಿದ್ದಾರೆ, ಆದ್ದರಿಂದ ಅವರಿಗೆ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಉನ್ನತ ಖಾತೆ ಹೊಂದಿದ ಸಚಿವ ಸ್ಥಾನ ನೀಡಬೇಕೆಂದು ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಡಲಗಿರಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ದೇವೇಂದ್ರಪ್ಪ ದಳವಾಯಿ ಮಾತನಾಡುತ್ತಾ 2013 ರಿಂದ 2018 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಉನ್ನತ ಶಿಕ್ಷಣ ಖಾತೆ ನಿರ್ವಹಿಸಿದ ಹಾಗೂ ಅದಕ್ಕೂ ಹಿಂದೆ ವಸತಿ ಖಾತೆಯನ್ನು ನಿಭಾಯಿಸಿ ಶಾಸಕ ಸಂಸದ ಸ್ಥಾನದ ಅನುಭವಿ ಹೊಂದಿರುವ ಅಭಿವೃದ್ಧಿಯ ಹರಿಕಾರ ಎಂದೆನಿಸಿದ ರಾಜಕಾರಣಿಗೆ ಉನ್ನತ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡನ್ನು ಆಗ್ರಹಪಡಿಸಿದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0