ಕರಸೇವಕನ ಬಂಧನ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಇದರ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕೈವಾಡ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.
ಕರಸೇವಕನ ಬಂಧನ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಇದರ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕೈವಾಡ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.
ಹುಬ್ಬಳ್ಳಿ :
ಕರಸೇವಕನ ಬಂಧನ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಇದರ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕೈವಾಡ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಇದರ ಲಾಭ ಪಡೆಯುವ ಹುನ್ನಾರ ಅವರದ್ದಾಗಿದೆ. ಬಿಜೆಪಿ ಧಾರ್ಮಿಕ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಂದಾಗುತ್ತಿದೆ. ಮಾತ್ರವಲ್ಲ, ಬಿಜೆಪಿ ಧಾರ್ಮಿಕ ವಿಷಯಗಳ ಮೇಲೆ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ ಎಂದು ಟೀಕಿಸಿದರು.
ಈ ಹಿಂದೆ ನಾನು ಮುಖ್ಯಮಂತ್ರಿ, ಶಾಸಕನಾಗಿದ್ದಾಗ ಹಿಂದೂ, ಕರಸೇವಕರ ಮೇಲಿನ ಹೋರಾಟದ ಪ್ರಕರಣಗಳನ್ನು ವಜಾಗೊಳಿಸಲು ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಅಲ್ಲದೇ 30 ವರ್ಷಗಳ ಹಳೆಯ ಹೋರಾಟದ ಪ್ರಕರಣಗಳನ್ನು ಪರಿವೀಕ್ಷಣೆ ಮಾಡಲು ತಿಳಿಸಿದ್ದೇನೆ. ಈ ಹಿಂದೆ ಬಿಜೆಪಿ 7-8 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಆಗವಾಗಲೇ ಕರಸೇವಕರ ಮೇಲೆ ಅಭಿಮಾನ ಇದ್ದರೆ ಕೇಸ್’ಗಳನ್ನು ವಜಾಗೊಳಿಸಬೇಕಿತ್ತು. ಇದಕ್ಕೆ ಅವರು ಉತ್ತರ ಕೊಡಬೇಕೆಂದು ಒತ್ತಾಯಿಸಿದರು.
ಶ್ರೀಕಾಂತ್ ಪೂಜಾರ ಬಗ್ಗೆ ರಾಜ್ಯಾದ್ಯಂತ ಹೋರಾಟ ಮಾಡುವ ಆರ್.ಅಶೋಕ ಹಿಂದೆ ಗೃಹ ಸಚಿವರಾಗಿದ್ದರು ಆಗ ಯಾಕೆ ಕೇಸ್ ಹಿಂದೆ ಪಡೆಯಲಿಲ್ಲ. ಇದೀಗ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಇಂತಹ ವಿಷಯಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೊಂದು ಲೋಕಸಭಾ ಚುನಾವಣೆ ಗಿಮಿಕ್ ಆಗಿದೆ ಎಂದು ಲೇವಡಿ ಮಾಡಿದರು.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0