ಆಧುನಿಕ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವುದನ್ನು ಬಿಟ್ಟು ಓದುವ ಇಚ್ಚಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಚಂದ್ರಶೇಖರ ಹಿರೇಮಠ ಹೇಳಿದರು.
ಆಧುನಿಕ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವುದನ್ನು ಬಿಟ್ಟು ಓದುವ ಇಚ್ಚಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಚಂದ್ರಶೇಖರ ಹಿರೇಮಠ ಹೇಳಿದರು.
ಕುಕನೂರು :
ಆಧುನಿಕ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವುದನ್ನು ಬಿಟ್ಟು ಓದುವ ಇಚ್ಚಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಚಂದ್ರಶೇಖರ ಹಿರೇಮಠ ಹೇಳಿದರು.
ತಾಲೂಕಿನ ಭಾನಾಪುರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಮಕ್ಕಳಿಗೆ ಓದುವ ಬೆಳಕು ಕಾರ್ಯಕ್ರಮದಡಿ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಆಧುನಿಕ ಯುಗದಲ್ಲಿ ಮೊಬೈಲ್ ದಾಸರಾಗುತ್ತಿದ್ದಾರೆ
ಮಕ್ಕಳು ಆದಷ್ಟು ಮೊಬೈಲ್ ಫೋನ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕವನ್ನು ಓದುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಮಕ್ಕಳಿಗೆ ಏಳು ದಿನಗಳ ಕಾಲ ಓದುವ ಬೆಳಕು ಕಾರ್ಯಕ್ರಮ ಆಯೋಜಿಸಲಾಗಿದ್ದು ಗ್ರಾಮೀಣ ಬಡ ಮಕ್ಕಳಿಗೆ ತುಂಬಾ ಅನುಕೂಲವಾಗಿದೆ, ಗ್ರಾಮೀಣ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳ ಕುರಿತು ಪಾಠ ಮಾಡಲಾಗುತ್ತಿದೆ, ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳು ಬೇಸಿಗೆ ರಜೆಯಲ್ಲಿ ಓದಿನ ಕಡೆ ಗಮನ ಕೊಡದೆ ಆಟ ಪಾಠಗಳಲ್ಲಿ ಸಮಯ ವ್ಯರ್ಥ ಮತ್ತು ವರ್ಷಪೂರ್ತಿ ಕಲಿತ ವಿದ್ಯೆಯನ್ನು ಮರೆಯುತ್ತಿದ್ದರು ಈ ಬೇಸಿಗೆ ಶಿಬಿರದಿಂದ ಮಕ್ಕಳು ಕಲಿತ ವಿಷಯಗಳನ್ನು ಪುನರಾವರ್ತನೆ ಮಾಡಿಕೊಳ್ಳುತ್ತಾರೆ ಎಲ್ಲಾ ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ
ಪಡಿಸಿಕೊಳ್ಳಬೇಕು ಮತ್ತು ಈ ಕಾರ್ಯಕ್ರಮವನ್ನು ಆಯೋಜಿಸಿದ ಇಲಾಖೆಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ಭಂಗಿ, ಸದಸ್ಯರಾದ ನೀಲಕಂಠಯ್ಯ ಶಶಿಮಠ,ರಾಮಣ್ಣ ಕೋಮಲಾಪೂರ,ಯಲ್ಲಪ್ಪ ಮೇಟಿ,ಯಮನಪ್ಪ ತಳವಾರ್ ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0