2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ, ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಕಾಂಗ್ರೆಸ್‌ ಪಕ್ಷದಿಂದ ಸಿಎಂ ಯಾರಾಗ್ತಾರೆ ಅನ್ನೋ ಕೂತೂಹಲ ರಾಜ್ಯದ ಜನತೆಯಲ್ಲಿದೆ. ಈ ಬೆನ್ನಲ್ಲೇ ಇಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದಾರೆ. ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಕೂಡ ದೆಹಲಿಗೆ ಹೊರಟಿದ್ದು, ಅದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು.