ಕಳೆದ ಒಂದು ವಾರದಿಂದ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಯಥೇಚ್ಛವಾಗಿ ಕಾಣಿಸಿಕೊಂಡಿದ್ದು ಆರೋಗ್ಯ ಇಲಾಖೆ ಸಿಬ್ಬಂದಿಗಳು ರಾತ್ರಿಯಿಡಿ ಗಾವರಾಳ ಗ್ರಾಮದಲ್ಲಿ ಬಿಡುಬಿಟ್ಟು ರೋಗಿಗಳಿಗೆ ಚಿಕಿತ್ಸೆಯನ್ನು ನಡೆಸಿದ್ದಾರೆ.
ಕಳೆದ ಒಂದು ವಾರದಿಂದ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಯಥೇಚ್ಛವಾಗಿ ಕಾಣಿಸಿಕೊಂಡಿದ್ದು ಆರೋಗ್ಯ ಇಲಾಖೆ ಸಿಬ್ಬಂದಿಗಳು ರಾತ್ರಿಯಿಡಿ ಗಾವರಾಳ ಗ್ರಾಮದಲ್ಲಿ ಬಿಡುಬಿಟ್ಟು ರೋಗಿಗಳಿಗೆ ಚಿಕಿತ್ಸೆಯನ್ನು ನಡೆಸಿದ್ದಾರೆ.
ಕೊಪ್ಪಳ :
ಕಳೆದ ಒಂದು ವಾರದಿಂದ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಯಥೇಚ್ಛವಾಗಿ ಕಾಣಿಸಿಕೊಂಡಿದ್ದು ಆರೋಗ್ಯ ಇಲಾಖೆ ಸಿಬ್ಬಂದಿಗಳು ರಾತ್ರಿಯಿಡಿ ಗಾವರಾಳ ಗ್ರಾಮದಲ್ಲಿ ಬಿಡುಬಿಟ್ಟು ರೋಗಿಗಳಿಗೆ ಚಿಕಿತ್ಸೆಯನ್ನು ನಡೆಸಿದ್ದಾರೆ.
ಜಿಲ್ಲೆಯಾದ್ಯಂತ ವಾಂತಿಬೇದ ಪ್ರಕರಣಗಳು ಹೆಚ್ಚಾಗಿದ್ದು ಕುಷ್ಟಗಿ ತಾಲೂಕಿನ ಬಿಜಕಲ್, ಯಲಬುರ್ಗಾ ತಾಲೂಕಿನ ಗದಿಗೇರಿ, ಕುಕನೂರು ತಾಲೂಕಿನ ಗಾವರಾಳ ಗ್ರಾಮಗಳಲ್ಲಿ ವಾಂತಿಭೇದಿ ಪ್ರಕರಣಗಳು ಹೆಚ್ಚಾಗಿದ್ದು ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಒಂದು ಹೆಣ್ಣು ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ,
ಎಚ್ಚೆತ್ತ ಆರೋಗ್ಯ ಇಲಾಖೆ ನುರಿತ ವೈದ್ಯರು ,ಸಿಬ್ಬಂದಿಗಳು ಹಗಲು ರಾತ್ರಿ ಗ್ರಾಮಗಳಲ್ಲಿ ಬೀಡು ಬಿಟ್ಟು ರೋಗಿಗಳಿಗೆ ಬೇಕಾದಂತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ,
ನಂತರ ಸಮುದಾಯ ಆರೋಗ್ಯ ಕೇಂದ್ರ ವೈದ್ಯ ಡಾಕ್ಟರ್ ಪ್ರಕಾಶ್ ಮಾತನಾಡಿ ಕಲುಷಿತ ನೀರು ಕಲುಷಿತ ಆಹಾರ ಸೇವನೆಯಿಂದ ವಾಂತಿಭೇದಿ ಪ್ರಕರಣಗಳು ದಾಖಲಾಗಿವೆ, ಆರೋಗ್ಯ ಇಲಾಖೆ ಗಾವರಾಳ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆಯುವಂತೆ ಸೂಚಿಸಿದ್ದು ರೋಗೀಗಳಿಗೆ ಗ್ರಾಮದಲ್ಲಿ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ, ರೋಗಿಗಳಿಗೆ ಬೇಕಾದ ಚಿಕಿತ್ಸೆಯನ್ನು ಗ್ರಾಮದಲ್ಲೇ ನೀಡಲಾಗುತ್ತಿದ್ದು ರೋಗಿಗಳು ಅಂಗನವಾಡಿ ಕೇಂದ್ರದಲ್ಲಿ ತೆರೆಯಲಾದ ತಾತ್ಕಾಲಿಕ ಆರೋಗ್ಯ ಕೇಂದ್ರದಲ್ಲಿ ಬಂದು ತಪಾಸನೆ ಮಾಡಿಸಿಕೊಳ್ಳಬೇಕು, ರೋಗಿಗಳಿಗೆ ಬೇಕಾದಂತಹ ಎಲ್ಲಾ ವ್ಯವಸ್ಥೆ ಇಲಾಖೆಯಿಂದ ಮಾಡಲಾಗಿದ್ದು ಅಂಬುಲೆನ್ಸ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ, ಗ್ರಾಮಸ್ಥರು ಆದಷ್ಟು ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು, ಕಾಯಿಸಿದ ನೀರನ್ನು ಕುಡಿಯಬೇಕು, ಹಣ್ಣು ಹಂಪಲ ತಿನ್ನಬೇಕು ,ತಂಗಳು ಊಟ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0