ರೋಣ ತಾಲೂಕಿನಲ್ಲಿ ಅಗಷ್ಟ 15 ರಂದು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ ಮಕ್ಕಳಿಗೆ 10 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭಗೊಳ್ಳಲಿವೆ
ರೋಣ ತಾಲೂಕಿನಲ್ಲಿ ಅಗಷ್ಟ 15 ರಂದು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ ಮಕ್ಕಳಿಗೆ 10 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭಗೊಳ್ಳಲಿವೆ
ರೋಣ :
ರೋಣ ತಾಲೂಕಿನಲ್ಲಿ ಅಗಷ್ಟ 15 ರಂದು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ ಮಕ್ಕಳಿಗೆ 10 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭಗೊಳ್ಳಲಿವೆ ಎಂದು ರೋಣ ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉದ್ಘಾಟನಾ ಹೊಸ್ತಿಲಲ್ಲಿ ಇರುವ ಶಿಶುಪಾಲನ ಕೇಂದ್ರಗಳನ್ನು ಪರಿಶೀಲಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಜವಾಬ್ದಾರಿ ಪ್ರತಿಯೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ ಎಂದರು.
ರಾಜ್ಯ ಸರ್ಕಾರವು ಕೂಲಿ ಕಾರ್ಮಿಕರ ಶಿಶುಗಳ 06 ತಿಂಗಳಿಂದ 03 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ತನ್ನ ಮಡಿಲಿಗೆ ಹಾಕಿಕೊಂಡಿದೆ. ತಾಲೂಕಿನ 10 ಗ್ರಾಮ ಗ್ರಾಮ ಪಂಚಾಯತಿಗಳಾದ ಹೊಸಳ್ಳಿ, ಕುರಹಟ್ಟಿ, ಅಬ್ಬಿಗೇರಿ, ಯಾವಗಲ್, ಕೌಜಗೇರಿ,ಬೆಳವಣಕಿ,ಹೊಳೆಮಣ್ಣೂರು, ಹೊಳೆಆಲೂರು,ಸವಡಿ, ಜಕ್ಕಲಿ ಗ್ರಾಮಗಳಲ್ಲಿ ಅಗಷ್ಟ 15 ರಂದು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಉದ್ಘಾಟನೆ ಆಗಲಿವೆ ಎಂದರು.
ವಿವಿಧ ಗ್ರಾಮ ಪಂಚಾಯತಿ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಐಇಸಿ ಸಂಯೋಜಕ ವೀರಭದ್ರಪ್ಪ ಸಜ್ಜನ, ತಾಲೂಕ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ಹಾಗೂ ಪಿಡಿಓ,ಬಿಎಫ್ ಟಿ, ಜಿಕೆಎಮ್ ಗಳು ಇದ್ದರು.
ಶಿಶುಪಾಲನ ಕೇಂದ್ರದ ಮುಖ್ಯ ಉದ್ದೇಶ:
ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಗಳ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ಕೂಲಿಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ.ಇಂತಹ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ.ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ ಜೊತೆಗೆ ಪೌಷ್ಠಿಕ ಆಹಾರ ದೊರೆಯುವುದಿಲ್ಲ ಇದರಿಂದ ಮಕ್ಕಳು ಅಪೌಷ್ಠಿಕತೆಗೆ ಒಳಗಾಗಬಹುದಾಗಿದೆ. ಇದರಿಂದ ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುತ್ತದೆ. ಈ ಸಮಸ್ಯೆಗಳ ನಿವಾರಣೆಗೆ ಸರಕಾರ ಈ ಯೋಜನೆ ಆರಂಭಿಸಿದೆ. ಹಳ್ಳಿಗಳ ಮಹಿಳೆಯರು ತಮ್ಮ ಮಕ್ಕಳ ಕುರಿತು ಚಿಂತಿಸಿ, ಮಾನಸಿಕವಾಗಿ ಕುಗ್ಗದೇ ಈ ಯೋಜನೆಯ ಸದುಪಯೋಗಪಡೆದುಕೊಂಡು ನಿಶ್ಚಿಂತೆಯಿಂದ ಕೂಸಿನ ಮನೆಯಲ್ಲಿ ತಮ್ಮ 06 ತಿಂಗಳಿಂದ 03 ವರ್ಷದೊಳಗಿನ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ತೆರಳಬಹುದು.
ಮಹಾಂತೇಶಗೌಡ ಪಾಟೀಲ್
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0