ಲೋಕಸಭಾ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಕೂಡ ಹೆಚ್ಚುತ್ತಿದೆ. ಪ್ರತಿ ಕ್ಷೇತ್ರದಲ್ಲೂ ಟಿಕೆಟ್ ಆಕಾಂಕ್ಷಿಗಳ ದೊಡ್ಡಪಟ್ಟಿಯೇ ಇದ್ದರೂ, ಅಂತಿಮವಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಕ್ಷೇತ್ರದ ಮತದಾರರು ಮಾತ್ರವಲ್ಲದೇ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲೂ ಮನೆ ಮಾಡಿದೆ. ಅದೇ ರೀತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದೀಗ ಎಲ್ಲರ ಕುತೂಹಲವನ್ನು ಹೆಚ್ಚು ಮಾಡುತ್ತಿದೆ.
ಮಂಡ್ಯ :
ಲೋಕಸಭಾ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಕೂಡ ಹೆಚ್ಚುತ್ತಿದೆ. ಪ್ರತಿ ಕ್ಷೇತ್ರದಲ್ಲೂ ಟಿಕೆಟ್ ಆಕಾಂಕ್ಷಿಗಳ ದೊಡ್ಡಪಟ್ಟಿಯೇ ಇದ್ದರೂ, ಅಂತಿಮವಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಕ್ಷೇತ್ರದ ಮತದಾರರು ಮಾತ್ರವಲ್ಲದೇ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲೂ ಮನೆ ಮಾಡಿದೆ. ಅದೇ ರೀತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದೀಗ ಎಲ್ಲರ ಕುತೂಹಲವನ್ನು ಹೆಚ್ಚು ಮಾಡುತ್ತಿದೆ.
ರಾಜಕೀಯದಲ್ಲಿ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ಎಲ್ಲಾ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ಅಖಾಡವಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬುದು ಎಲ್ಲ ಪಕ್ಷಗಳ ಲೆಕ್ಕಾಚಾರವಾಗಿದೆ. ಈ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಸ್ಪರ್ಧಿಸುತ್ತಾರೆಂಬ ಚರ್ಚೆ ಶುರುವಾಗಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಕುರಿತಂತೆ ಕ್ಷೇತ್ರದಲ್ಲಿ ಚರ್ಚೆಗಳು ಶುರುವಾಗಿದೆ.
ರಾಜಕೀಯದಲ್ಲಿ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ಎಲ್ಲಾ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ಅಖಾಡವಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬುದು ಎಲ್ಲ ಪಕ್ಷಗಳ ಲೆಕ್ಕಾಚಾರವಾಗಿದೆ. ಈ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಸ್ಪರ್ಧಿಸುತ್ತಾರೆಂಬ ಚರ್ಚೆ ಶುರುವಾಗಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಕುರಿತಂತೆ ಕ್ಷೇತ್ರದಲ್ಲಿ ಚರ್ಚೆಗಳು ಶುರುವಾಗಿದೆ.
ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿ ಬರುತ್ತಿದ್ದಂತೆ ಸ್ಪರ್ಧೆಗೆ ಸ್ಥಳೀಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ. ನಿಖಿಲ್ ಅಭ್ಯರ್ಥಿಯಾದಲ್ಲಿ ತಮಗೆ ಟಿಕೆಟ್ ಬೇಡ ಎನ್ನುವ ಮೂಲಕ ಈವೆರಗೂ ಟಿಕೆಟ್ಗಾಗಿ ಒತ್ತಡ ಹಾಕುತ್ತಿದ್ದ ಕಾಂಗ್ರೆಸ್ ಆಕಾಂಕ್ಷಿಗಳ ಹೊಸವರಸೆ ಆರಂಭಿಸಿದಂತಿದೆ. ನಿಖಿಲ್ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿದ್ದಂತೆ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ನಿರುತ್ಸಾಹ ಕಾಣುತ್ತಿದ್ದು, ಲೋಕಸಭಾ ಚುನಾವಣೆ ಸಂಬಂಧ ನಡೆದ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸ್ಥಳೀಯ ಮುಖಂಡರು ತಮ್ಮ ಹೆಸರನ್ನು ಪ್ರಸ್ತಾಪಿಸದೆ ಮೌನಕ್ಕೆ ಶರಣಾಗಿದ್ದರು. ಇತ್ತೀಚೆಗೆ ಸಚಿವ ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಚಾರವಾಗಿ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿನ ಚರ್ಚೆ ನಡೆಸದ ಪರಿಣಾಮ ಅಭ್ಯರ್ಥಿ ಆಯ್ಕೆ ವಿಚಾರವನ್ನು ಹೈಕಮಾಂಡ್ಗೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ.
ಈ ಹಿಂದೆ ಟಿಕೆಟ್ಗಾಗಿ ಸಾಲುಗಟ್ಟಿ ನಿಂತಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡರು, ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಹೆಸರು ಚರ್ಚೆಗೆ ಬರ್ತಿದ್ದಂತೆ ಲೋಕಸಭಾ ಚುನಾವಣೆ ವಿಚಾರದಲ್ಲಿ ನಿರುತ್ಸಾಹ ತೋರುತ್ತಿದ್ದಾರೆ. ಹೈಕಮಾಂಡ್ ಒತ್ತಾಯಿಸಿ ಟಿಕೆಟ್ ಪಡೆದರೂ ಮೈತ್ರಿ ಅಭ್ಯರ್ಥಿ ವಿರುದ್ಧ ಸ್ಪರ್ಧೆ ಮಾಡುವುದು ಸುಲಭವಲ್ಲ ಎಂಬ ನಿರ್ಧಾರಕ್ಕೆ ಬಂದಿರುವ ಸ್ಥಳೀಯ ಕೈ ನಾಯಕರಲ್ಲಿ, ಚುನಾವಣೆಗೆ ಸ್ಪರ್ಧಿಸಿದರೆ ದೊಡ್ಡಮಟ್ಟದಲ್ಲಿ ಹಣ ಖರ್ಚು ಮಾಡಬೇಕೆಂಬ ಆತಂಕ ಕೂಡ ಇದೆ. ಹೀಗಾಗಿ ಯಾರಿಗಾದರೂ ಟಿಕೆಟ್ ಕೊಡಿ, ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂಬ ಮಾತುಗಳನ್ನು ಹೇಳುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುವ ತೀರ್ಮಾನಕ್ಕೆ ಬಂದಂತ್ತಿದೆ.
ವರದಿ : ರವಿಕುಮಾರ
ಠೀಕೆಗಳು 0