ತಾಲೂಕಿನ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಜಾಸ್ತಿಯಾಗಿದ್ದು ಅನೇಕ ಜನರು ಅಸ್ವಸ್ಥರಾಗಿದ್ದಾರೆ, ಎಂಟರಿಂದ 10 ಜನ ರೋಗಿಗಳು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಗಾವರಾಳ ಗ್ರಾಮಕ್ಕೆ ಜಿಲ್ಲಾ ವೈದ್ಯಾಧಿಕಾರಿ ಅಲಕಾನಂದ ಮೇಡಂ ಸಾಯಂಕಾಲ 7:00ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಕನೂರು :
ತಾಲೂಕಿನ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಜಾಸ್ತಿಯಾಗಿದ್ದು ಅನೇಕ ಜನರು ಅಸ್ವಸ್ಥರಾಗಿದ್ದಾರೆ, ಎಂಟರಿಂದ 10 ಜನ ರೋಗಿಗಳು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಗಾವರಾಳ ಗ್ರಾಮಕ್ಕೆ ಜಿಲ್ಲಾ ವೈದ್ಯಾಧಿಕಾರಿ ಅಲಕಾನಂದ ಸಾಯಂಕಾಲ 7:00ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರದಲ್ಲಿ ಮಾತನಾಡಿದ ಅವರು ಕಲುಷಿತ ನೀರಿನಿಂದ ಅಥವಾ ಕಲುಷಿತ ಆಹಾರ ಸೇವನೆಯಿಂದ ವಾಂತಿಭೇದಿ ಉಲ್ಬಣಿಸುತ್ತದೆ, ಗ್ರಾಮಸ್ಥರು ಆದಷ್ಟು ಕಾಯಿಸಿದ ನೀರನ್ನು ಸೇವನೆ ಮಾಡಬೇಕು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಕೊಡಬೇಕು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಯಾರಿಗಾದರೂ ವಾಂತಿ ಮತ್ತು ಭೇದಿ ಕಾಣಿಸಿಕೊಂಡಲ್ಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದ್ದು ಡಾಕ್ಟರ್ ಗಳು ಮತ್ತು ಸಿಬ್ಬಂದಿಗಳನ್ನು 24 ಗಂಟೆ ನಿಮ್ಮ ಸೇವೆಗೆ ನಿಯೋಜಿಸಲಾಗಿದೆ ರೋಗಿಗಳು ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಡಾಕ್ಟರ್ ಗಳು ಹೇಳಿದ ಸಲಹೆ ಸೂಚನೆಗಳನ್ನು ಪಾಲಿಸಬೇಕು ಎಂದರು.
ವೈದ್ಯರು 24 ಗಂಟೆಗಳ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರತರಾಗಿ ರೋಗಿಗಳಿಗೆ ಬೇಕಾದಂತ ಚಿಕಿತ್ಸೆಯನ್ನು ನೀಡುವುದರ ಜೊತೆಗೆ ಅವರಿಗೆ ಬೇಕಾದಂತ ಸಲಹೆ ಸೂಚನೆಗಳನ್ನು ನೀಡಿ ಆರೋಗ್ಯದ ಬಗ್ಗೆ ತಿಳಿ ಹೇಳಬೇಕು ಹೆಚ್ಚಿನ ಆರೋಗ್ಯ ತಪಾಸನೆಗೆ ಕುಕನೂರು ಸರ್ಕಾರಿ ಆಸ್ಪತ್ರೆ ಅಥವಾ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ರೋಗಿಯ ಆರೋಗ್ಯದ ಬಗ್ಗೆ ಗಮನ ಹರಿಸಬೇಕೆಂದು ತಿಳಿಸಿದರು.
ಮೊದಲ ದಿನದ ರಾತ್ರಿ ಸೇವೆಗಾಗಿ ಮಸಬ ಹಂಚಿನಾಳ ಆಸ್ಪತ್ರೆ ಡಾ//ಪ್ರಕಾಶ್,ಆಶಾ ಕಾರ್ಯಕರ್ತೆ ಶ್ರೀಮತಿ ಮಂಜುಳಾ ದೊಡ್ಡಮನಿ,ಸ್ಟಾಪ್ ನರ್ಸ್ ಕಾಳಪ್ಪ ಗೊಂದಿ,108 ವಾಹನ ಪೈಲೆಟ್ ಮಂಜುನಾಥ ನಾಗರೆಡ್ಡಿ ಇದ್ದರು.
ಈ ಸಮಯದಲ್ಲಿ ತಾಲೂಕು ವೈದ್ಯಧಿಕಾರಿ ಡಾ// ಸುಮಾ ಕೊಣ್ಣೂರ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಗಾವರಾಳ, ವೈದ್ಯರು, ಸಿಬ್ಬಂದಿಗಳು ಇದ್ದರು.
ನಿಂಗರಾಜ ದೊಡ್ಡಮನಿ
ಠೀಕೆಗಳು 0