ಜಿಲ್ಲೆಯಾದ್ಯಂತ ವಾಂತಿಭೇದಿ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ತಡ ರಾತ್ರಿ ಯಲಬುರ್ಗಾ ತಾಲೂಕಿನ ಸಾಲಬಾವಿ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಾದ್ಯಂತ ವಾಂತಿಭೇದಿ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ತಡ ರಾತ್ರಿ ಯಲಬುರ್ಗಾ ತಾಲೂಕಿನ ಸಾಲಬಾವಿ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಪ್ಪಳ :
ಜಿಲ್ಲೆಯಾದ್ಯಂತ ವಾಂತಿಭೇದಿ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ತಡ ರಾತ್ರಿ ಯಲಬುರ್ಗಾ ತಾಲೂಕಿನ ಸಾಲಬಾವಿ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮದ ಸುತ್ತಲೂ ಸುತ್ತಾಡಿ ಕುಡಿಯುವ ನೀರಿನ ಮೂಲ ಬಾವಿಯ ನೀರನ್ನು ಪರಿಶೀಲನೆ ನಡೆಸಿ ಬಾವಿಯ ನೀರನ್ನು ಸರಬರಾಜು ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಿದರು,ಚರಂಡಿ ಮತ್ತು ಜೆ ಜೆ ಎಂ ಕಾಮಗಾರಿಗಳನ್ನು ವೀಕ್ಷಣೆಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿ ರೋಗಿಗಳ ಬಗ್ಗೆ ಗಮನ ಹರಿಸಲು ಸಲಹೆ ನೀಡಿದರು,ಗ್ರಾಮದ ವಾಂತಿಭೇದಿ ಪ್ರಕರಣಗಳ ಸಂಕ್ಷಿಪ್ತ ವರದಿ ಪಡೆದುಕೊಂಡು ರೋಗಿಗಳ ಆರೋಗ್ಯ ವಿಚಾರಿಸಿದರು.
ನಂತರದಲ್ಲಿ ಮಾತನಾಡಿದ ಅವರು ಗ್ರಾಮಸ್ಥರು ಕಲುಷಿತ ನೀರು ಸೇವನೆಯಿಂದ ವಾಂತಿಭೇದಿ ಪ್ರಕರಣಗಳು ದಾಖಲಾಗಿವೆ, ಗ್ರಾಮಸ್ಥರು ಆದಷ್ಟು ಬಾವಿಯ ನೀರನ್ನು ಕುಡಿಯುವುದನ್ನು ನಿಲ್ಲಿಸಿ ಜಲ ಜೀವನ ಮಿಷನ್ ಯೋಜನೆಯಡಿ ಒದಗಿಸುವ ನೀರನ್ನು ಅಥವಾ ಶುದ್ಧ ಕುಡಿಯುವ ನೀರನ್ನು ಕುಡಿಯಬೇಕು,ನೀರನ್ನು ಕಾಯಿಸಿ ಕುಡಿಯುವ ಉತ್ತಮ, ಬಯಲು ಶೌಚಾಲಯ ಹೋಗುವುದನ್ನು ನಿಲ್ಲಿಸಿ ಶೌಚಾಲಯವನ್ನು ಬಳಸಬೇಕು ಎಂದು ಹೇಳಿದರು.
ತಾಲೂಕು ಟಿ ಎಚ್ ಒ ಸುಮಾ ಪಾಟೀಲ್ ಮಾತನಾಡಿ ಸಾಲಬಾವಿ ಗ್ರಾಮದಲ್ಲಿ ಎರಡು ದಿನಗಳಲ್ಲಿ ಒಟ್ಟು 21ಪ್ರಕರಣಗಳು ದಾಖಲಾಗಿದ್ದು,ಎಲ್ಲರಿಗೂ ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ, ಯಾರು ಕೂಡ ಭಯ ಪಡುವ ಅಗತ್ಯವಿಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದು 24×7 ರೋಗಿಗಳ ಸೇವೆಯನ್ನು ಮಾಡುತ್ತಿದ್ದಾರೆ,ಅವರ ಜೊತೆಗೆ ತುರ್ತು ಸೇವೆಗೆ ಅಂಬುಲೆನ್ಸ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ, ನೀರಿನ ಟ್ಯಾಂಕರ್ ಗಳನ್ನು ಸ್ವಚ್ಚಗೊಳಿಸಿ,ಪೈಪ್ ಲೈನ್ ಗಳನ್ನು ಸರಿಪಡಿಸಿ,ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ.ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಜನರಿಗೆ ಆರೋಗ್ಯದ ಬಗ್ಗೆ ತಿಳಿ ಹೇಳಿ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ, ಪ್ರಕರಣಗಳು ಹೆಚ್ಚಾದ ಪರಿಣಾಮ ಶಾಲೆಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ.ಅಲಕನಂದಾ ಮಳಗಿ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಪಾಟೀಲ್ ಬಿರಾದಾರ್, ತಾಲೂಕು ಆಸ್ಪತ್ರೆ ಆರೋಗ್ಯಾಧಿಕಾರಿಗಳಾದ ಡಾ. ಸುಮಾ ಎಸ್. ಪಾಟೀಲ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಿಡಿಒ, ಸಿಬ್ಬಂದಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ನಿಂಗರಾಜ ದೊಡ್ಡಮನಿ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0