ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಗವಿಸಿದ್ದೇಶ್ವರ ಮಠ ಹಾಗೂ ಬೆಂಗಳೂರಿನ ಸೆಲ್ಕೊ ಫೌಂಡೇಶನ್ ವತಿಯಿಂದ ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಜ.21-01-2024ರಂದು ಬೆಳಿಗ್ಗೆ 11ಕ್ಕೆ ಶ್ರೀ ಗವಿಮಠ ಯಾತ್ರಿ ನಿವಾಸ ಆವರಣದ ಶಾಂತವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಗವಿಸಿದ್ದೇಶ್ವರ ಮಠ ಹಾಗೂ ಬೆಂಗಳೂರಿನ ಸೆಲ್ಕೊ ಫೌಂಡೇಶನ್ ವತಿಯಿಂದ ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಜ.21-01-2024ರಂದು ಬೆಳಿಗ್ಗೆ 11ಕ್ಕೆ ಶ್ರೀ ಗವಿಮಠ ಯಾತ್ರಿ ನಿವಾಸ ಆವರಣದ ಶಾಂತವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೊಪ್ಪಳ :
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಗವಿಸಿದ್ದೇಶ್ವರ ಮಠ ಹಾಗೂ ಬೆಂಗಳೂರಿನ ಸೆಲ್ಕೊ ಫೌಂಡೇಶನ್ ವತಿಯಿಂದ ವಿಶೇಷ ಚೇತನರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಜ.21-01-2024ರಂದು ಬೆಳಿಗ್ಗೆ 11ಕ್ಕೆ ಶ್ರೀ ಗವಿಮಠ ಯಾತ್ರಿ ನಿವಾಸ ಆವರಣದ ಶಾಂತವನದಲ್ಲಿ ಹಮ್ಮಿಕೊಳ್ಳಲಾಗಿತ್ತು , ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಬಾಗಲಕೋಟೆಯ ಘನಶ್ಯಾಮ ಬಾಂಡಗೆ ಅವರು ಅತಿಥಿಗಳಾಗಿ ಆಗಮಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಮತ್ತು ಸಬಲೀಕರಣದ ಅಧಿಕಾರಿಯಾದ ಶ್ರೀದೇವಿ ಮತ್ತು ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.
21 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿಕಲಚೇತನರ ಭವಿಷ್ಯಕ್ಕೆ ಭದ್ರತೆನ ಒದಗಿಸುವ " ನೇಸರ ಆಸರೆ" ಯೋಜನೆಯ ಮೂಲಕ 21 ಜೋಡಿ ಮದುಮಕ್ಕಳಿಗೆ ಮದುವೆಯ ನಂತರ ಜೆರಾಕ್ಸ್ ಮಷೀನ್, ಮತ್ತು ಸಣ್ಣ ಅಂಗಡಿಯ ಪೆಟ್ಟಿಗೆಗಳನ್ನು ಉಚಿತವಾಗಿ ವಿತರಿಸಲಾಯಿತು.
ಎಲ್ಲಾ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಮ ನಿ ಪ್ರ ಜಗದ್ಗುರು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಸಿದ್ದರು.
23-01-2024 ಮಂಗಳವಾರ ಸಂಜೆ 5 ಗಂಟೆಗೆ ಬಸವ ಪಟ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮಠದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜಾತ್ರ ಕಾರ್ಯಕ್ರಮದಲ್ಲಿ ಮೊದಲನೇ ಕಾರ್ಯಕ್ರಮ ಇದಾಗಿತ್ತು ಇಂದಿನಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ಭಕ್ತಿ ಭಾವದಿಂದ ಜಾತ್ರಾ ಮಹೋತ್ಸವ ನಡೆಯುವುದು ಅದರ ಮೊದಲ ಪ್ರಾರಂಭವೇ ಬಸವಪಟ್ಟ ಹಾಗೂ ಕೈಲಾಸ ಮಂಟಪದ ಮೇಲಗಡೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ಉಡಿತುಂಬುವ ಕಾರ್ಯಕ್ರಮ ನಡೆಯಿತು . ಸಾವಿರಾರು ಮಹಿಳೆಯರು ತಮ್ಮ ಮನೆಗಳಿಂದ ತಂದಿದ್ದ ಹಸಿರು ಬಳೆ, ಉಡಿ ತುಂಬುವ 5 ಸಾಮಾನುಗಳು, ಎಲೆಯ ಅಡಿಕೆ, ಹಣ್ಣು ಮುಂತಾದವುಗಳನ್ನು ಪಾಲ್ಗೊಂಡಿದ್ದ ಕನಿಷ್ಠ ಐದು ಮಹಿಳೆಯರಿಗೆ ಉಡಿ ತುಂಬುವುದರ ಮೂಲಕವಾಗಿ ಒಬ್ಬರಿಗೊಬ್ಬರು ಪರಸ್ಪರವಾಗಿ ಆತ್ಮೀಯತೆಯಿಂದ ಈ ಧಾರ್ಮಿಕ ಕಾರ್ಯಗಳಲ್ಲಿ ಸೌಹಾರ್ದತೆ ಮತ್ತು ಸಹಕಾರದೊಂದಿಗೆ ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದರು.
ವರದಿ : ವೀರೇಶ ಹಿರೇಮಠ
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0