ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ತಯಾರಿಯಲ್ಲಿದೆ. ಗ್ಯಾರಂಟಿಗಳ ಜಾರಿ ಜೊತೆಗೆ ಜನಬೆಂಬಲದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‌ಗೆ ಕಾಂಗ್ರೆಸ್ ಒಳಗೆ ಶುರುವಾಗುತ್ತಿರುವ ಅಧಿಕಾರ ಹಂಚಿಕೆ ವಿಚಾರ ತಲೆಬಿಸಿ ತರಿಸುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನ ಕೊಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದಾರೆ.