ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ತಯಾರಿಯಲ್ಲಿದೆ. ಗ್ಯಾರಂಟಿಗಳ ಜಾರಿ ಜೊತೆಗೆ ಜನಬೆಂಬಲದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ಗೆ ಕಾಂಗ್ರೆಸ್ ಒಳಗೆ ಶುರುವಾಗುತ್ತಿರುವ ಅಧಿಕಾರ ಹಂಚಿಕೆ ವಿಚಾರ ತಲೆಬಿಸಿ ತರಿಸುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನ ಕೊಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದಾರೆ.
ಬೆಳಗಾವಿ :
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ತಯಾರಿಯಲ್ಲಿದೆ. ಗ್ಯಾರಂಟಿಗಳ ಜಾರಿ ಜೊತೆಗೆ ಜನಬೆಂಬಲದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ಗೆ ಕಾಂಗ್ರೆಸ್ ಒಳಗೆ ಶುರುವಾಗುತ್ತಿರುವ ಅಧಿಕಾರ ಹಂಚಿಕೆ ವಿಚಾರ ತಲೆಬಿಸಿ ತರಿಸುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಸ್ಥಾನ ಕೊಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುಬ ಸಚಿವ ಸತೀಶ್ ಜಾರಕಿಹೊಳಿ, ನಾನು ಬೆಳಗಾವಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ, ಈಗಾಗಲೇ ಅಧ್ಯಕ್ಷರಿಗೂ ಈ ಬಗ್ಗೆ ಸ್ಪಷ್ಟಪಡಿಸಿದ್ದೇನೆ. ಹೈಕಮಾಂಡ್ ಹೇಳಿದರೂ ಕೂಡ ಸ್ಪರ್ಧೆ ಮಾಡಲ್ಲ ಅಂತ ಹೇಳ್ತೀನಿ. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳಿದ್ದಾರೆ. ಹೈಕಮಾಂಡ್ ಜಾತಿವಾರು ಡಿಸಿಎಂ ಹುದ್ದೆ ಮಾಡಿದರೆ ಅನುಕೂಲವಾಗಲಿದೆ. ಶಾಸಕರಿಂದಲೂ ಈ ಬಗ್ಗೆ ಬೇಡಿಕೆ ಇದೆ. ಸಚಿವರನ್ನೂ ಕೂಡ ಜಾತಿ ಆಧಾರದಲ್ಲೇ ಮಾಡುವುದು. ಹಾಗಾಗಿ ಡಿಸಿಎಂ ಸ್ಥಾನವನ್ನು ಜಾತಿವಾರು ಮಾಡೋದರಿಂದ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂದಿದ್ದಾರೆ.
ನನ್ನ ಜೊತೆ ಸಮಾನ ಮನಸ್ಕ ಶಾಸಕರಿದ್ದಾರೆ. ಮುಂದೆ ಪಕ್ಷಕ್ಕೆ ಅನುಕೂಲ ಆಗಬೇಕು. ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಬೇಕೆಂಬುದು ನಮ್ಮ ಉದ್ದೇಶ. ಡಿಸಿಎಂ ಹುದ್ದೆ ವಿಚಾರ ಅಧ್ಯಕ್ಷರು ಮಾತಾಡಬೇಕಿದೆ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಡೆಗೆ ಬೊಟ್ಟು ಮಾಡಿದ್ದಾರೆ. ಈ ಬಗ್ಗೆ ಸಚಿವ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸತೀಶ್ ಜಾರಕಿಹೊಳಿ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದರಲ್ಲಿ ಏನೂ ತಪ್ಪಿಲ್ಲ. ಡಿಸಿಎಂ ಸ್ಥಾನ ಕೊಡೋದು ಬಿಡೋದು ತೀರ್ಮಾನ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದಿದ್ದಾರೆ. ಜೊತೆಗೆ ನಾನು ಡಿಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ ಅಂತಾನೂ ತಿಳಿಸಿದ್ದಾರೆ.
ಕಾಂಗ್ರೆಸ್ ಈ ಬಾರಿ ಅಬ್ಬರದ ಜಯಭೇರಿ ಬಾರಿಸುವ ಸಾಧ್ಯತೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ, ಈ ರೀತಿ ಅಧಿಕಾರ ಹಂಚಿಕೆಯ ವೈಮನಸ್ಸು ಸೃಷ್ಟಿಯಾಗುವುದು ಹಿನ್ನಡೆಗೆ ಕಾರಣವಾಗುತ್ತದೆ ಎನ್ನುವಂತಹ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಬೆಳಗಾವಿಯಲ್ಲಿ ಈಗಾಗಲೇ ಕಾಂಗ್ರೆಸ್ನಲ್ಲಿ ಟಿಕೆಟ್ ಫೈಟಿಂಗ್ ಶುರುವಾಗಿದ್ದು, ಈ ನಡುವೆ ಸತೀಶ್ ಜಾತಕಿಹೊಳಿ ಡಿಸಿಎಂ ಅಸ್ತ್ರ ಬಳಕೆ ಮಾಡಿರುವುದು ಕಾಂಗ್ರೆಸ್ ನಾಯಕರ ಪಾಲಿಗೆ ಅರಗಿಸಿಕೊಳ್ಳಲಾಗದೆ ತುತ್ತು ಎನ್ನುವಂತಾಗಿದೆ.
ವರದಿ : ಹನುಮಂತ ಮಡಿವಾಳರ
ಠೀಕೆಗಳು 0