ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮರುದಿನವೇ ಐದು ಗ್ಯಾರಂಟಿಗಳನ್ನ ಜಾರಿ ಮಾಡುತ್ತೇವೆ ಎಂದು ಹೇಳಿ ಇದುವೆರಗೂ ಜಾರಿ ಮಾಡಿಲ್ಲ ಎಂದು ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಸರ್ಕಾರ ಮೀನಮೇಷ ಎಣಿಸುತ್ತಿರುವುದರ ಪರಿಣಾಮವಾಗಿ ರಾಜ್ಯದ ಸ್ವಾಸ್ಥ್ಯ ಸಂಪೂರ್ಣವಾಗಿ ಹದಗೆಡುತ್ತಿದೆ.