ಭಾರತೀಯ ಸಮಾಜ ಲಿಂಗಬೇಧದ ಅಸಮಾನತೆಯಲ್ಲಿಬಳಲುತ್ತಿದ್ದಾಗ, ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿಸಾವಿತ್ರಿಬಾಯಿ ಫುಲೆ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಮಹಿಳಾ ಶಿಕ್ಷಕಿ ಎಂದು ಮುಖ್ಯ ಶಿಕ್ಷಕಿ ನಾಜೀಯಾ ಮುದಗಲ್ ಹೇಳಿದರು.
ಭಾರತೀಯ ಸಮಾಜ ಲಿಂಗಬೇಧದ ಅಸಮಾನತೆಯಲ್ಲಿಬಳಲುತ್ತಿದ್ದಾಗ, ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿಸಾವಿತ್ರಿಬಾಯಿ ಫುಲೆ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಮಹಿಳಾ ಶಿಕ್ಷಕಿ ಎಂದು ಮುಖ್ಯ ಶಿಕ್ಷಕಿ ನಾಜೀಯಾ ಮುದಗಲ್ ಹೇಳಿದರು.
ಗದಗ :
ಭಾರತೀಯ ಸಮಾಜ ಲಿಂಗಬೇಧದ ಅಸಮಾನತೆಯಲ್ಲಿಬಳಲುತ್ತಿದ್ದಾಗ, ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿಸಾವಿತ್ರಿಬಾಯಿ ಫುಲೆ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಮಹಿಳಾ ಶಿಕ್ಷಕಿ ಎಂದು ಮುಖ್ಯ ಶಿಕ್ಷಕಿ ನಾಜೀಯಾ ಮುದಗಲ್ ಹೇಳಿದರು.
ನಗರದ ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ಸಾವಿತ್ರಿಬಾಯಿ ಪುಲೆ ಜಯಂತಿ ಆಚರಣೆಯಲ್ಲಿ ಭಾಗಿಯಾಗಿ ಮಾತನಾಡಿದರು.
"1830ರಿಂದ ಭಾರತೀಯ ಸಮಾಜದಲ್ಲಿಆರಂಭವಾದ ಸುಧಾರಣೆ ಹಾಗೂ ಕ್ರಾಂತಿಕಾರಕ ಬದಲಾವಣೆಗಳು ಈತನಕ ಮುಂದುವರಿದಿವೆ. ಆದರೂ ಸಮಾಜದಲ್ಲಿಲಿಂಗ ಅಸಮಾನತೆ ಉಳಿದಿದೆ. ರಾಜಕೀಯದಲ್ಲಿಮಹಿಳಾ ಮೀಸಲಾತಿ ಬೇಡಿಕೆಯೂ ಹಾಗೆ ಉಳಿದುಕೊಂಡಿದೆ. ಬಾಲ್ಯವಿವಾಹವಾಗಿದ್ದರೂ, ಪತಿ ಜ್ಯೋತಿಬಾ ಅವರಿಂದ ಪ್ರೇರಣೆ ಪಡೆದು ಅಕ್ಷರ ಕಲಿತು ಶಿಕ್ಷಕ ತರಬೇತಿ ಮುಗಿಸಿ, ದಲಿತ ಮತ್ತು ಶೋಷಿತ ಸಮುದಾಯದ ಬಾಲಕಿಯರಿಗೆ ಶಾಲೆ ಪ್ರಾರಂಭಿಸಿ, ಶಿಕ್ಷಕಿಯಾದ ಸಾವಿತ್ರಿಬಾಯಿ ಫುಲೆ ಅವರ ಜೀವನ ರೋಚಕವಾದುದು. ಸಮಾಜದ ಬಹಿಷ್ಕಾರ ಹಾಗೂ ಹೆಜ್ಜೆ ಹೆಜ್ಜೆಗೂ ಅವಮಾನ ಅನುಭವಿಸಿದರೂ, ಛಲ ಬಿಡದೇ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ ಸಾವಿತ್ರಿಬಾಯಿಯನ್ನು ಭಾರತೀಯ ಸಮಾಜ ಎಂದೂ ಮರೆಯಬಾರದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರಾದ ಅನುಷಾ ತಳವಾರ, ರೂಪಾ ಗೊಂದಳೆ, ಸಾವಿತ್ರಿ ಹಾವೇರಿ, ಶೋಭಾ ಕೆಂಗಾರ, ಪೃಥ್ವಿ ಗೊಂದಳೆ ಸೇರಿದಂತೆ ಅನೇಕರು ಇದ್ದರು.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0