ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪಕ್ಷವನ್ನು ಮುನ್ನಡೆಸಿ ಚುನಾವಣೆ ಗೆಲ್ಲಿಸಿದ್ದೇನೆ. ಸಿಎಂ ಸ್ಥಾನ ನನಗೇ ಕೊಡಬೇಕು ಎಂದು ಹೈಕಮಾಂಡ್ ಎದುರು ಪಟ್ಟು ಹಿಡಿದು ಕುಳಿತಿದ್ದರು. ಇಡೀ ರಾಜ್ಯಾದ್ಯಂತ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅನ್ನೋ ಕಾರಣಕ್ಕೆ ಜನರು ಮತ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪಕ್ಷವನ್ನು ಮುನ್ನಡೆಸಿ ಚುನಾವಣೆ ಗೆಲ್ಲಿಸಿದ್ದೇನೆ. ಸಿಎಂ ಸ್ಥಾನ ನನಗೇ ಕೊಡಬೇಕು ಎಂದು ಹೈಕಮಾಂಡ್ ಎದುರು ಪಟ್ಟು ಹಿಡಿದು ಕುಳಿತಿದ್ದರು. ಇಡೀ ರಾಜ್ಯಾದ್ಯಂತ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅನ್ನೋ ಕಾರಣಕ್ಕೆ ಜನರು ಮತ ನೀಡಿದ್ದಾರೆ.
ಬೆಂಗಳೂರು :
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪಕ್ಷವನ್ನು ಮುನ್ನಡೆಸಿ ಚುನಾವಣೆ ಗೆಲ್ಲಿಸಿದ್ದೇನೆ. ಸಿಎಂ ಸ್ಥಾನ ನನಗೇ ಕೊಡಬೇಕು ಎಂದು ಹೈಕಮಾಂಡ್ ಎದುರು ಪಟ್ಟು ಹಿಡಿದು ಕುಳಿತಿದ್ದರು. ಇಡೀ ರಾಜ್ಯಾದ್ಯಂತ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅನ್ನೋ ಕಾರಣಕ್ಕೆ ಜನರು ಮತ ನೀಡಿದ್ದಾರೆ. ಹೀಗಾಗಿ ನಾನು ಮುಖ್ಯಮಂತ್ರಿ ಆಗಬೇಕು ಎಂದು ವಾದ ಮಂಡಿಸಿದ ಸಿದ್ದರಾಮಯ್ಯ, ಅಂತಿಮವಾಗಿ ಎಲ್ಲಾ ಶಾಸಕರು ಒಕ್ಕೋರಲಿನಿಂದ ಆಯ್ಕೆ ಮಾಡುವವರು ಮುಖ್ಯಮಂತ್ರಿ ಆಗಲಿ ಎಂದು ಷರತ್ತು ಹಾಕಿದ್ದರು. ಶಾಸಕರ ಆಯ್ಕೆಗೆ ಬಿಟ್ಟರೆ ನಾನು ಸಿಎಂ ಆಗುವುದಿಲ್ಲ ಎಂಬುದನ್ನು ಮನಗಂಡಿದ್ದ ಡಿ.ಕೆ ಶಿವಕುಮಾರ್, ಹೈಕಮಾಂಡ್ ಮಟ್ಟದಲ್ಲೇ ಒಂದು ತೀರ್ಮಾನ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆಗ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಆಗಲಿ, ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿ ಆಗಲಿ ಎನ್ನುವ ನಿಲುವು ಪ್ರಕಟ ಮಾಡಿತ್ತು. ಅಲ್ಲೂ ಮತ್ತೊಂದು ಷರತ್ತು ವಿಧಿಸಿದ್ದ ಡಿ.ಕೆ ಶಿವಕುಮಾರ್, ನನ್ನ ಜೊತೆಗೆ ಬೇರೆ ಯಾರನ್ನೂ ಉಪಮುಖ್ಯಮಂತ್ರಿ ಮಾಡಬಾರದು ಎಂದು ಕೇಳಿಕೊಂಡಿದ್ದರು. ಮೊದಲನೇ ಸೋಲಿನಲ್ಲೂ ಸಣ್ಣ ಪ್ರಮಾಣದ ಲಾಭ ಮಾಡಿಕೊಂಡಿದ್ದರು.
ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನ ಫಿಕ್ಸ್..!
ಹೈಕಮಾಂಡ್ ನಿರ್ಧಾರ ಪ್ರಕಟ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಹೇಳಿಕೆ ಹೊರಬಿದ್ದಿತ್ತು. ಎರಡೂವರೆ ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಆ ಬಳಿಕ ಉಳಿದ ಎರಡೂವರೆ ವರ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಆಪ್ತಬಣ ಬಹಿರಂಗವಾಗಿಯೇ ಹೇಳಿತ್ತು. ಆ ಬಳಿಕ ಡಿ.ಕೆ ಶಿವಕುಮಾರ್ ಆಪ್ತರು ಅಲ್ಲಲ್ಲಿ, ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ. ಅವರಿಗೆ ಸಿಎಂ ಆಗುವ ಅರ್ಹತೆ ಇದೆ ಎಂದು ಮಾಧ್ಯಮಗಳಲ್ಲಿ ಬಹಿರಂಗವಾಗಿಯೇ ಚರ್ಚೆ ಮಾಡಿದ್ದರು. ಇದರಿಂದ ಸರ್ಕಾರಕ್ಕೆಮುಜುಗರ ಆಗುತ್ತಿದೆ ಜೊತೆಗೆ ಪಕ್ಷದ ಇಮೇಜ್ಗೆ ಧಕ್ಕೆ ಆಗುತ್ತಿದೆ ಎಂದು ಸಿದ್ದರಾಮಯ್ಯ ಹೈಕಮಾಂಡ್ ಗಮನ ಸೆಳೆದಿದ್ದರು. ಆ ಬಳಿಕ ಪಂಚ ರಾಜ್ಯಗಳ ಚುನಾವಣೆ ನಡುವೆಯೂ ರಾಜ್ಯಕ್ಕೆ ಭೇಟಿ ನೀಡಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಹಾಗು ವೇಣುಗೋಪಾಲ್ ಪಕ್ಷದ ಯಾವುದೇ ವಿಚಾರದ ಬಗ್ಗೆ ಶಾಸಕರು ಹಾಗು ಸಚಿವರು ಯಾವುದೇ ಹೇಳಿಕೆ ನೀಡಬಾರದು ಎಂದು ಕಟ್ಟಪ್ಪಣೆ ಹೊರಡಿಸಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಡಿ.ಕೆ ಶಿವಕುಮಾರ್ಗೆ ಎರಡನೇ ಬಾರಿಗೆ ಹಿನ್ನಡೆ ಆಗಿರುವುದನ್ನು ಒತ್ತಿ ಹೇಳುವಂತಿದೆ.
ಈಗಲೂ ನಾನೇ ಸಿಎಂ.. ಮುಂದೆಯೂ ನಾನೇ.. ಐದು ವರ್ಷ ನಾನೇ
ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯಪುರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಹೊಸಪೇಟೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಐದು ವರ್ಷ ನಮ್ಮದೇ ಸರ್ಕಾರ, ನಾನೇ ಸಿಎಂ ಆಗಿ ಮುಂದುವರಿಯುವೆ ಎನ್ನುವ ಮೂಲಕ ಸಿಎಂ ಬದಲಾವಣೆ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಇತಿಶ್ರೀ ಹಾಡಿದ್ದಾರೆ. ಐದು ವರ್ಷ ನೀವೇ ಸಿಎಂ ಆಗಿರ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ನೇರವಾಗಿ ಉತ್ತರ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ನಾನೇ ಮುಂದುವರಿಯುವೆ ಎಂದು ಕಡ್ಡಿ ಮುರಿದಂತೆ ಉತ್ತರಿಸಿದ್ದಾರೆ. ಇನ್ನು ಮೂವರು ಡಿಸಿಎಂ ಮಾಡಬೇಕು ಅನ್ನೋ ಚರ್ಚೆ ನಡೆಯುತ್ತಿದೆ ಅದಕ್ಕೆ ನಿಮ್ಮ ಉತ್ತರ ಏನು ಎನ್ನುವ ಪ್ರಶ್ನೆಗೆ ಡಿಸಿಎಂ ವಿಚಾರದಲ್ಲಿ ತಿರ್ಮಾನ ಮಾಡೋದು ಹೈಕಮಾಂಡ್. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎನ್ನುವ ಮೂಲಕ ಡಿಸಿಎಂ ಮಾಡುವುದಕ್ಕೆ ಪರೋಕ್ಷವಾಗಿ ಬೆಂಬಲ ಇದೆ ಎನ್ನುವ ಸಂದೇಶ ಕಳುಹಿಸಿದ್ದಾರೆ.
ಡಿ.ಕೆ ಶಿವಕುಮಾರ್ ಮಟ್ಟ ಹಾಕುವ ನಿರ್ಧಾರ ಹಿಂದಿನ ಗುಟ್ಟು..?
ಸಿದ್ದರಾಮಯ್ಯ ಐದು ವರ್ಷಗಳ ಕಾಲ ನಾನೇ ಸಿಎಂ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಡಿ.ಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಒಕ್ಕಲಿಗರ ಸಂಘದ ಸಭೆ ಬಳಿಕ ಮಾತನಾಡಿದ ಡಿಸಿಎಂ, ನಾನು ಈ ಬಗ್ಗೆ ಏನು ಮಾತನಾಡುವುದಿಲ್ಲ. ಮಾತಾಡೋರು ಮಾತನಾಡಲಿ, ನಾನೇನು ಅದರ ಬಗ್ಗೆ ಕಮೆಂಟ್ ಮಾಡಲ್ಲ ಎಂದಿದ್ದಾರೆ. ನಾನು ಯಾವುದನ್ನೂ ಎಲ್ಲೂ ಏನು ಮಾತಾಡಿಲ್ಲ. ಏನು ಮಾತಾಡಲ್ಲ, ಮಾತಾಡೋದು ಇಲ್ಲ, ಪಾರ್ಟಿ ಹೇಳಿದ್ದನ್ನು ಕೇಳಿಕೊಂಡು ಹೋಗೋದು ಅಷ್ಟೆ ಗೊತ್ತು. ನನಗೆ ಬೇರೆ ಏನು ಗೊತ್ತಿಲ್ಲ ಎಂದಿದ್ದಾರೆ. ಮಾತಿನಲ್ಲಿ ಹೇಳಲು ಆಗದೆ ಇರುವುದನ್ನು, ಮಾತನಾಡೋರು ಮಾತನಾಡಲಿ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಆದರೆ ಡಿಸಿಎಂ ಅನ್ನೋ ಪೋಸ್ಟ್ ಪಡೆದುಕೊಂಡಿರುವ ಡಿ.ಕೆ ಶಿವಕುಮಾರ್, ಎಲ್ಲಾ ಸಚಿವರ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡ್ತಿದ್ದಾರೆ ಅನ್ನೋ ಆರೋಪ ಎದುರಾಗಿದೆ. ಅಷ್ಟೇ ಅಲ್ಲದೆ ಸ್ವತಃ ಸಿಎಂ ಮಾಡುವ ಆದೇಶಗಳನ್ನು ರದ್ದುಪಡಿಸಿದ ಉದಾಹರಣೆಗಳು ಇವೆ ಅನ್ನೋದು ಕಾಂಗ್ರೆಸ್ ಮೂಲಗಳೇ ಹೇಳುತ್ತಿರುವ ಮಾತು. ಇನ್ನು ಈ ಬಾರಿ ಸಿದ್ದರಾಮಯ್ಯ 2013 ಅಧಿಕಾರ ನಡೆಸಿದಂತೆ ನಡೆಸ್ತಿಲ್ಲ ಅನ್ನೋದು ಕಾಂಗ್ರೆಸ್ ಶಾಸಕರ ಆರೋಪ. ಇದನ್ನೆಲ್ಲಾ ನೋಡಿದ ಹೈಕಮಾಂಡ್, ಡಿ.ಕೆ ಶಿವಕುಮಾರ್ಗೆ ಲೋಕಸಭಾ ಚುನಾವಣೆ ಮುಗಿಯುವ ತನಕ ಒಗ್ಗಟ್ಟು ಕಾಯ್ದುಕೊಳ್ಳದಿದ್ದರೆ ಕಷ್ಟ ಆಗುತ್ತದೆ ಎಂದು ಎಚ್ಚರಿಸಿದ್ದಾರೆ ಎನ್ನಲಾಗ್ತಿದೆ. ಇದೇ ಕಾರಣಕ್ಕೆ ಡಿ.ಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗ್ತಿದೆ.
Like
Dislike
Love
Angry
Sad
Funny
Wow
Your experience on this site will be improved by allowing cookies.
ಠೀಕೆಗಳು 0