ಮೈಸೂರಿನ ಹೆಬ್ಬಾಳು ಬಡಾವಣೆಯಲ್ಲಿರುವ ಕೆ.ಎಫ್.ಸಿ.ಐ. ಗೋದಾಮಿನಿಂದ ಬೆಂಗಳೂರಿನತ್ತ ಲಾರಿ ಮೂಲಕ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದೊರೆತ ಖಚಿತ ಮಾಹಿತಿ ಮೇರೆಗೆ 4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.