ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ರಾಜ್ಯದ ಜನತೆಗೆ ಅಕ್ಕಿ ವಿತರಣೆ ವಿಚಾರವಾದಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ.
ಬಿಜೆಪಿ ನಾಯಕರೆಲ್ಲ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಸಿಗುವಂತೆ ಮಾಡಬೇಕು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಡವರ ಕಾರ್ಯಕ್ರಮಕ್ಕೆ ಅಡ್ಡಿ ಬರಬೇಡಿ, ಅಕ್ಕಿ ಕೊಡಿಸಿ ಎಂದು ಹೇಳಿದ್ದಾರೆ.
ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Your experience on this site will be improved by allowing cookies.