ವಿಶ್ವ ಪರಿಸರ ದಿನದ ನಿಮಿತ್ಯ ಕುಕನೂರು- ಯಲಬುರ್ಗಾ ತಾಲೂಕಿನಾದ್ಯಂತ 40,000 ಸಸಿ ನೆಡುವ ಗುರಿ ಹೊಂದಲಾಗಿದೆ ಎಂದು ವಲಯ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ಇಲಾಖೆ) ಅನಂತಕುಮಾರ್ ಪಾಕಿ ತಿಳಿಸಿದರು.
ಕಾಡಿನಿಂದ ಹಾದಿ ತಪ್ಪಿ ಬೆಂಗಳೂರಿನ ಕೂಡ್ಲು ಬಳಿಗೆ ಬಂದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಡುವ ಬದಲು ಗುಂಡೇಟು ಹೊಡೆದು ಸಾಯಿಸಿದ ಪ್ರಕರಣ ಜಾನಾಕ್ರೋಶಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ಪ್ರಾಣಿ ಪ್ರಿಯ, ಸಾಮಾಜಿಕ ಹೋರಾಟಗಾರ ಮಹಾಂತೇಶಗೌಡ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾನಾಗಿಯೇ ಬಲೆ ಬಿದ್ದ ಚಿರತೆಯನ್ನು ಗುಂಡಿಟ್ಟು ಕೊಲೆ ಮಾಡುವಂತಹದು ಏನಾಗಿತ್ತು..? ಚಿರತೆ ಮನುಷ್ಯರ ಮೇಲೆ ಭೀಕರವಾಗಿ ದಾಳಿ ಮಾಡಿತ್ತೇ..? ಅಥವಾ ಈ ಹಿಂದೆ ಮನುಷ್ಯರನ್ನು ಕೊಂದು ತಿಂದಿದ್ದ ಬಗ್ಗೆ ಏನಾದರೂ ಅರಣ್ಯ ಇಲಾಖೆಗೆ ಮಾಹಿತಿ ಇತ್ತೇ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೊಸ ವರ್ಷದ ಆರಂಭದಲ್ಲೇ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ ರಾತ್ರಿ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ವಸಂತ್(45) ಎಂಬುವರು ಬಲಿಯಾಗಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಹಾಗೂ ಮೃತನ ಸಂಬಂಧಿಕರು ಪ್ರತಿಭಟನೆಗೆ ನಡೆಸಿದರು.
Your experience on this site will be improved by allowing cookies.