ರಾಜ್ಯ ಕಂಡ ಧೀಮಂತ ನಾಯಕ, ಭಾಗ್ಯಗಳ ಸರದಾರ, ಹಸಿವು ಮುಕ್ತ ಕರ್ನಾಟಕದ ರೂವಾರಿ ಎಂದೇ ಪ್ರಖ್ಯಾತಿ ಪಡೆದ ಅಹಿಂದ ನಾಯಕ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಯನ್ನಾಗಿ ಘೋಷಣೆ ಮಾಡಿ ಮತ್ತು ಅಭಿವೃದ್ಧಿ ಹರಿಕಾರ ಬಸವರಾಜ ರಾಯರೆಡ್ಡಿ ಅವರನ್ನು ಕ್ಯಾಬಿನೇಟ್ ದರ್ಜೆ ಮಂತ್ರಿಯನ್ನಾಗಿ ಮಾಡಿ ಎಂದು ಬ್ಲಾಕ್ ಕಾಂಗ್ರೆಸ್ಸ್ ಕುಕನೂರ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮಹೇಶ್ ಗಾವರಾಳ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ
ರಾಜ್ಯದ ೨೪ ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ರು.
ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳಿತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಯಲಬುರ್ಗಾ ತಾಲೂಕಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ವೀರೇಶ ಪೋಲೀಸ್ಪಾಟೀಲ್ ಕಾಂಗ್ರೇಸ್ ಹೈಕಮಾಂಡಗೆ ಒತ್ತಾಯ ಮಾಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಆಗಿ, ಡಿ.ಕೆ.ಶಿವಕುಮಾರ್ ಅವರನ್ನು ಡಿಸಿಎಂ ಆಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೀಗಾಗಲೇ ಘೋಷಣೆ ಮಾಡಲಾಗಿದೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಜಾ ಸಂಪುಟದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನವನ್ನು ನೀಡಬೇಕೆಂದು ಈಡಿಗ ಸಮಾಜದ ತಾಲೂಕು ಅಧ್ಯಕ್ಷರು ಮತ್ತು ಕಾಂಗ್ರೆಸ್ ಮುಖಂಡ ವೆಂಕಟೇಶ್ ಈಳಗೇರ್ ಒತ್ತಾಯಿಸಿದರು
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಸಿದ್ಧವಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇದೀಗ ಹೈಕಮಾಂಡ್ ನಾಯಕರು ಕಗ್ಗಂಟು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ರೋಣ ಶಾಸಕ ಜಿ.ಎಸ್.ಪಾಟೀಲರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಭೋವಿ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಯಲ್ಲಪ್ಪ ಬಂಕದ ಹೇಳಿದರು.
ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.
ನೂತನ ಸಚಿವ ಸಂಪುಟಕ್ಕೆ ಯಾವ ಯಾವ ನಾಯಕರನ್ನು ಸೇರ್ಪಡೆ ಮಾಡಬೇಕು ಎಂಬುದನ್ನು ನಿರ್ಧರಿಸಲು ಶನಿವಾರ ಬೆಳಗಿನ ಜಾವದವರೆಗೂ ತೀವ್ರ ಚರ್ಚೆಗಳು ನಡೆಸಿದರೂ ಜಾತಿ ಹಾಗೂ ಪ್ರಾದೇಶಿಕ ಸಮೀಕರಣ ರೂಪಿಸುವ ಪ್ರಕ್ರಿಯೆ ಅಪೂರ್ಣಗೊಂಡ ಹಿನ್ನೆಲೆಯಲ್ಲಿ 28 ಮಂದಿಯ ಬದಲಾಗಿ ಕೇಲವ 8 ಮಂದಿ ಹಿರಿಯರನ್ನು ಮಾತ್ರ ಸಿಎಂ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಸೇರ್ಪಡೆಗೊಳಿಸಲಾಯಿತು.