ರಾಜ್ಯದ ೨೪ ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂದು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ರು.
ಈ ಬಾರಿ ಉಪಮುಖ್ಯಮಂತ್ರಿ ನಾನೊಬ್ಬನೇ ಆಗಬೇಕು ಎಂದಿರುವ ಡಿಕೆ ಶಿವಕುಮಾರ್ ಷರತ್ತಿಗೆ ಡಾ . ಜಿ ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪ್ರಭಾವಿ ದಲಿತ ನಾಯಕರಿಗೂ ಡಿಸಿಎಂ ಆಗುವ ಅವಕಾಶ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕಾಂಗ್ರೆಸ್ ಸರ್ಕಾರವೂ ಸ್ಪಷ್ಟ ಬಹುಮತ ಸರ್ಕಾರ ಆಡಳತ ನಡೆಸಲು ಸಜ್ಜಾಗಿದೆ.ಈ ಹಿನ್ನಲೆಯಲ್ಲಿ ರೋಣ ಶಾಸಕ ಜಿ.ಎಸ್.ಪಾಟೀಲರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಭೋವಿ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಯಲ್ಲಪ್ಪ ಬಂಕದ ಹೇಳಿದರು.
Your experience on this site will be improved by allowing cookies.