ರಾಜ್ಯದಲ್ಲಿ ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳದ್ದೇ ಸದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ೨ ಸಾವಿರ ರೂ.ಖಾತೆಗೆ ಹಾಕುವುದು ಮತ್ತು ಉಚಿತ ಕರೆಂಟ್ ಸೇರಿದಂತೆ ಹಲವಾರು ಯೋಜನೆಗಳನ್ನ ಘೋಷಿಸಿದೆ. ಈ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದು, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೆ, ವಿದ್ಯುತ್ ದರ ಇಳಿಕೆ ಸಾಧ್ಯವಿಲ್ಲ. ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮ್ಮಯ ಸ್ಪಷ್ಟಪಡಿಸಿದ್ದಾರೆ.
ಗೃಹ ಜ್ಯೋತಿ ಯೋಜನೆಯಡಿ ಶನಿವಾರದ ವರೆಗೆ 45.61661 ಗ್ರಾಹಕರು ನೋಂದಣಿಗೊಂಡಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 11,17,208 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.
Your experience on this site will be improved by allowing cookies.