ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು.
ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಮಕ್ಕಳು ತೆರಿಗೆ ಪಾವತಿ ಮಾಡುತ್ತಿದ್ದರೆ ಅಂತಹ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮಾಸಿಕ 2000 ರೂಪಾಯಿ ಸೌಲಭ್ಯ ಸಿಗೋದಿಲ್ಲ ಅಂತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ
ಶಕ್ತಿ ಯೋಜನೆ ಜಾರಿಗೊಂಡು ಎರಡನೇ ದಿನವಾದ ಇಂದೂ ಸಹ ಮಹಿಳೆಯರ ಜೋಶ್ ಜೋರಾಗಿದೆ. ಬಸ್ನಲ್ಲಿ ಮಹಿಳೆಯರೇ ಮುಗಿಬಿದ್ದಿದ್ದು ಹಾಸನದಲ್ಲಂತೂ ಕಂಡಕ್ಟರ್ ಕಂಗಾಲಾಗಿ ಹೋಗಿದ್ದಾರೆ. ನಿನ್ನೆ ಭಾನುವಾರವಾದ್ದರಿಂದ ಪ್ರಯಾಣಿಕರ ಸಂಖ್ಯೆ ಕಡಿಮೆಯಿತ್ತು. ಆದರೆ ಇಂದು ಕೆಲಸಕ್ಕೆ ತೆರಳುವ ಹಾಗೂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದ್ದು ಬಸ್ ತುಂಬಾ ಮಹಿಳೆಯರೇ ತುಂಬಿದ್ದಾರೆ.
ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ರಾಜ್ಯದ ಜನತೆಗೆ ಅಕ್ಕಿ ವಿತರಣೆ ವಿಚಾರವಾದಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ.
ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್, ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳದ್ದೇ ಸದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ೨ ಸಾವಿರ ರೂ.ಖಾತೆಗೆ ಹಾಕುವುದು ಮತ್ತು ಉಚಿತ ಕರೆಂಟ್ ಸೇರಿದಂತೆ ಹಲವಾರು ಯೋಜನೆಗಳನ್ನ ಘೋಷಿಸಿದೆ. ಈ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದು, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೆ, ವಿದ್ಯುತ್ ದರ ಇಳಿಕೆ ಸಾಧ್ಯವಿಲ್ಲ. ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮ್ಮಯ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಶಕ್ತಿ ಯೋಜನೆ ಸೇರಿದಂತೆ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜೂನ್ 11ರಂದು ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯ್ತು. ಅದರಂತೆ ರಾಜ್ಯಾದ್ಯಂತ ಸಂಚಾರ ಮಾಡುವ ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಸಂಚಾರ ಮಾಡುತ್ತಿದ್ದಾರೆ. ಇದ್ರಿಂದ ಸಾಕಷ್ಟು ರೀತಿಯಲ್ಲಿ ಲಾಭವೇ ಆಗುತ್ತಿದೆ ಎನ್ನುವುದು ಸರ್ಕಾರದ ಅಂಕಿಅಂಶಗಳಿಂದ ಬಯಲಾಗಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಷ್ಟದ ಸುಳಿಗೆ ಸಿಲುಕಿ ಸಾರಿಗೆ ಸಂಸ್ಥೆ ನೌಕರರ ವೇತನ ಪಾವತಿ ಮಾಡದೆ ಪರದಾಡುವಂತಾಗಿದ್ದ ಸಂಸ್ಥೆಗಳು ಲಾಭದತ್ತ ಸಾಗಿದ್ದು, ನಿಗದಿತ ದಿನವೇ ಸಂಪೂರ್ಣ ವೇತನ ಕೂಡ ಬಿಡುಗಡೆ ಆಗಿರುವುದೇ ಅಚ್ಚರಿಯ ಅಂಶವಾಗಿದೆ.