ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರಸಭೆ ಆಯುಕ್ತರಿಗೆ ಪ್ರದೀಪ್ ಈಶ್ವರ್ ಸೂಚನೆ ನೀಡಿದ್ದಾರೆ. ನನ್ನ ಫ್ಲೆಕ್ಸ್ ಇರಬಾರದು ಬೇರೆಯವರ ಫ್ಲೆಕ್ಸ್ ಕೂಡ ಇರಬಾರದು. ಚಿಕ್ಕಬಳ್ಳಾಪುರ ನಗರ ಕ್ಲೀನ್ ಆಗಿರಬೇಕು. ಅಧಿಕಾರಿಗಳೇ, ಶಾಸಕರ ಪೋಟೋ ಇದೆ ಅಂತ ಭಯ ಬೀಳಬೇಡಿ. ನಾಳೆಯಿಂದ ಚಿಕ್ಕಬಳ್ಳಾಪುರ ನಗರದಲ್ಲಿ ಯಾವ ಫ್ಲೆಕ್ಸ್ ಇರಬಾರದು. ಫಸ್ಟ್ ನನ್ನ ಪೋಟೋ ಇರುವ ಫ್ಲೆಕ್ಸ್ ಕಿತ್ತು ಹಾಕಿ. ಚಿಕ್ಕಬಳ್ಳಾಪುರ ದಲ್ಲಿ ಫ್ಲೆಕ್ಸ್ ಕಲ್ಚರ್ ಇರಬಾರದು. ಯಾವ ಇನ್ ಪ್ಲೂಯನ್ಸ್ ಬಂದ್ರೂ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಧಿಕಾರಿಗಳಿಗೆ ಅಭಯ ನೀಡಿದ್ದಾರೆ.
ಹಿಂದೂ ಯುವಕ ಮುಸ್ಲಿಂ ಯುವತಿಯ ಜೊತೆ ಇದ್ದ ಕಾರಣಕ್ಕೆ ಮುಸ್ಲಿಂ ಯುವಕರು ನೈತಿಕ ಪೊಲೀಸ್ಗಿರಿ ತೋರಿದ ಘಟನೆಯು ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚೇಳೂರು ಮೂಲದ ಮುಸ್ಲಿಂ ಯುವತಿ ಹಾಗೂ ಚಿಂತಾಮಣಿಯ ಹಿಂದೂ ಯುವಕನ ಈ ಹಲ್ಲೆ ನಡೆದಿದೆ.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನನಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Your experience on this site will be improved by allowing cookies.