ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಅನೇಕ ಅಕ್ರಮ ಗಳನ್ನು ತಡೆಗಟ್ಟಲು ಚುನಾವಣೆ ಆಯೋಗ ಕಾರ್ಯ ಪ್ರವೃತ್ತರಾಗಬೇಕು, ಈ ನಿಟ್ಟಿನಲ್ಲಿ ಆಯೋಗ ಕಟ್ಟು ನಿಟ್ಟಿನ ಕ್ರಮ ಕೈಕೊಳ್ಳಬೇಕು ಎಂದು ಸೋಮರಡ್ಡಿ ಹೇಳಿದರು
2023ರ ಸಾರ್ವತ್ರಿಕ ಚುನಾವಣೆ ಫಲಿತಾಂಶ 13/05/2023ರ ಶನಿವಾರದಂದು ಪ್ರಕಟವಾಗಲಿದ್ದು ಮತ ಏಣಿಕೆ ಪ್ರಕ್ರಿಯೆ ಸಲುವಾಗಿ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎರಡೂವರೆ ವರ್ಷದ ಹಿಂದೆಯೇ ನಡೆಯಬೇಕಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ ಹತ್ತಾರು ಕಾರಣಗಳನ್ನು ಇಟ್ಟುಕೊಂಡು ಚುನಾವಣೆ ಮುಂದೂಡುವ ಪ್ರಯತ್ನ ಮಾಡಿತ್ತು.
ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಲೋಕಸಭೆ(Loka Saba) ಚುನಾವಣೆಯ(Election) ಪೂರ್ವಭಾವಿ ಸಭೆ(Meeting) ಕರೆಯಲಾಗಿದ್ದು, ಬೆಳಗ್ಗೆ ಪಕ್ಷದ ಎಲ್ಲಾ ಶಾಸಕರು, ಪದಾಧಿಕಾರಿಗಳು, ಚುನಾವಣೆ ಸ್ಪರ್ಧಿಸಿದ್ದ ನಾಯಕರ ಸಭೆ ನಡೆಸಲಾಗುವುದು.
2024 ರ ಲೋಕಸಭಾ ಚುನಾವಣೆಗೆ (LOKASABHA ELECTION 2024) ಬಿಜೆಪಿ ತೆರೆಮರೆಯಲ್ಲಿ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಒಂದು ಕಡೆ ಈಗಾಗಲೇ ಕ್ಷೇತ್ರವಾರು ಹಾಲಿ ಸಂಸದರನ್ನು ಕರೆದು ಸಭೆ ಮಾಡಿ, ಸ್ಥಳೀಯ ನಾಯಕರನ್ನು ಪರಿಗಣಿಸಿ ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ ಆಗುತ್ತಿದೆ. ಇನ್ನೊಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y VIJAYENDRA) ಸದ್ದಿಲ್ಲದೆ, ತಮ್ಮ ತಂಡದ ಮೂಲಕ ಪ್ರತಿ ಕ್ಷೇತ್ರದ ಹಾಲಿ ಸಂಸದರ ಮೌಲ್ಯಮಾಪನಕ್ಕೆ (Evaluation) ಮುಂದಾಗಿದ್ದಾರೆ.
2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಈಗಾಗಲೇ ಸಕಲ ಸಿದ್ಧತೆಗಳು ಬಿಜೆಪಿಯಲ್ಲಿ ಆರಂಭವಾಗಿದ್ದು, ಇತ್ತ ತಮ್ಮ ಪುತ್ರ ಕೆ.ಇ.ಕಾಂತೇಶ್ಗಾಗಿ ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಲಾಬಿ ಆರಂಭಿಸಿದ್ದಾರೆ.
ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಮತ್ತೆ ತವರು ಪಕ್ಷ ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ರನ್ನ ಭೇಟಿಯಾಗಿದ್ದ ಜಗದೀಶ್ ಶೆಟ್ಟರ್ ಮಹತ್ವದ ಮಾತುಕತೆ ನಡೆಸಿದ್ರು.
ಲೋಕಸಭಾ ಚುನಾವಣೆಯಲ್ಲಿ ಸಿಎಂ, ಡಿಸಿಎಂ ಕೂಡ ಸ್ಪರ್ಧೆ ಮಾಡಲಿ ಎಂಬ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.