ಬಿಜೆಪಿಯಿಂದ ಕಾಂಗ್ರೆಸ್ಗೆ ಹಾರಿದ ಬಳಿಕ ಚುನಾವಣೆಯಲ್ಲಿ ಸೋತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜೊತೆಯಲ್ಲಿ ಹುಬ್ಬಳ್ಳಿಯಲ್ಲಿಂದು ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಕರಸೇವಕನ ಬಂಧನ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಇದರ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕೈವಾಡ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.
ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಮತ್ತೆ ತವರು ಪಕ್ಷ ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ರನ್ನ ಭೇಟಿಯಾಗಿದ್ದ ಜಗದೀಶ್ ಶೆಟ್ಟರ್ ಮಹತ್ವದ ಮಾತುಕತೆ ನಡೆಸಿದ್ರು.
Your experience on this site will be improved by allowing cookies.