ಅತ್ಯಂತ ಆಕರ್ಷಣಿಯ ಮತಕ್ಷೇತ್ರವಾದ ರೋಣ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಜಿ ಎಸ್ ಪಾಟೀಲ ಗಜೇಂದ್ರಗಡದಲ್ಲಿ ಬೃಹತ್ ರೋಡ ಶೋ ಆರಂಭಿಸಿದರು.
ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್. ಪಾಟೀಲ ಅವರು ರೋಣ ಪಟ್ಟಣದಲ್ಲಿ ಪತ್ನಿ, ಮಕ್ಕಳು ಹಾಗೂ ಸೊಸೆಯಂದಿರ ಜತೆ ಆಗಮಿಸಿ ಮತದಾನ ಮಾಡುವ ಮೂಲಕ ಕ್ಷೇತ್ರದ ಜನತೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸೂಚಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರೋಣ ಮತಕ್ಷೇತ್ರಕ್ಕೆ ತನ್ನದೇಯಾದ ಐತಿಹಾಸಿಕ ಪರಂಪರೆ ಇದೇ. ಈ ಹಿಂದೆ ಬಿಜೆಪಿಯನ್ನ ಆಯ್ಕೆ ಮಾಡಿದ ಈ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿ ಪರ್ಸಂಟೆಜ್ ಸರ್ಕಾರ ಎಂಬ ಕಾರಣಕ್ಕೆ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಜಿ ಎಸ್ ಪಾಟೀಲ್ ಗೆ ಬಹುಮತದ ಜನಾದೇಶ ನೀಡಿದ್ದು ಈ ಕ್ಷೇತ್ರದ ಪರಂಪರೆಯಂದೆ ಹೇಳಬೇಕಾಗುತ್ತದೆ.
ರೋಣ ಮತಕ್ಷೇತ್ರದಿಂದ ಬಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಸಾವಿರ ಕರೆಗಳ ಸರದಾರ, ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕ ಜಿ ಎಸ್ ಪಾಟೀಲ್ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಕ್ಯಬಿನೇಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿಯ ಗದಗ ಜಿಲ್ಲಾಧ್ಯಕ್ಷ ಮಹಾಂತೇಶಗೌಡ ಪಾಟೀಲ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ ಅವರಿಗೆ ಒತ್ತಾಹಿಸಿದ್ದಾರೆ.
Your experience on this site will be improved by allowing cookies.